4:15 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಪೂರ್ವಜರ ಕಾಲದಿಂದಲೂ ಹರಕು ಬಟ್ಟೆ.. ಮುರುಕು ರೊಟ್ಟಿ..!: ಶತಮಾನ ಕಳೆದರೂ ಬದಲಾಗದ ನಿರ್ಗತಿಕರ ಬದುಕು!

04/12/2024, 14:59

*ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 5 ಗ್ಯಾರಂಟಿ ಯೋಜನೆಗಳಿಂದಲೂ ವಂಚಿತರಾಗಿರುವ ನಿರ್ಗತಿಕರು*

*ಸಿಎಂ ಸಿದ್ದರಾಮಯ್ಯನವರ ತವರು ನಂಜನಗೂಡು ನಗರಸಭೆ ಅಧಿಕಾರಿಗಳ ನಿರ್ಲಕ್ಷತನಕ್ಕೆ ದಿನ ಬೆಳಗಾದರೆ ನಂಜುಂಡನ ಮುಡಿಗೆ ತುಳಸಿ ಹಾರ ನೀಡುವವರ ಬದುಕು ಮೂರಾಬಟ್ಟೆ..!*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ನಂಜನಗೂಡು ನಗರಸಭಾ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷತನದಿಂದಾಗಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾದ ನಿರ್ಗತಿಕರರಾಗಿ ಜೀವನ ಸಾಗಿಸುತ್ತಿದ್ದಾರೆ.
ಧಾರ್ಮಿಕ ಪುಣ್ಯಕ್ಷೇತ್ರ ನಂಜುಂಡೇಶ್ವರನ ಸನಿಹದಲ್ಲಿಯೇ ತಲೆಮಾರುಗಳಿಂದ ನಿರ್ಗತಿಕ ಕುಟುಂಬಗಳು ವಾಸುತ್ತಿವೆ.
ಪೂರ್ವಜರ ಕಾಲದಿಂದಲೂ ನಂಜುಂಡೇಶ್ವರನಿಗೆ ಪ್ರಿಯವಾದ ತುಳಸಿಹಾರ ತಯಾರಿಕೆಯೇ ಇವರ ಕಾಯಕ.
ಸ್ವಂತ ಸೂರಿಲ್ಲ. ದಾಖಲಾತಿ ಇದ್ದರೂ ಸರ್ಕಾರದ ಗ್ಯಾರಂಟಿ ಯೋಜನೆ ದೊರೆಯುತ್ತಿಲ್ಲ.


ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೀನಾಯ ಪರಿಸ್ಥಿತಿಯಲ್ಲಿ ಜೀವನ ದೂಡುತ್ತಿರುವ ಸುಮಾರು 6 ಕುಟುಂಬದ 30ಕ್ಕೂ ಹೆಚ್ಚು ಮಂದಿ ಇದ್ದಾರೆ.
ನಂಜನಗೂಡು ಪಟ್ಟಣದ ಹಳ್ಳದ ಕೇರಿಯ ಮುಖ್ಯರಸ್ತೆ ಬದಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿವೆ. ವಾಸವಿರುವ ನಿವೇಶನವು ಇವರದಲ್ಲ. ಪುಟ್ಟ ಶೌಚಾಲಯವೂ ಇವರಿಗಿಲ್ಲ.
ಪ್ರತಿ ಚುನಾವಣೆಗಳ ಸಂದರ್ಭದಲ್ಲಿ ಮತ ಕೇಳಲು ಬಂದು ಬೆಟ್ಟದಷ್ಟು ಭರವಸೆಗಳನ್ನು ತುಂಬುತ್ತಾರೆ ರಾಜಕಾರಣಿಗಳು .
ಇದುವರೆಗೂ ನಮಗೆ ಸೌಲಭ್ಯಗಳು ದೊರೆತಿಲ್ಲ. ನಮಗೂ ಕೇಳಿ ಕೇಳಿ ಸಾಕಾಗಿದೆ. ಯಾರೊಬ್ಬರೂ ನಮಗೆ ಸಹಾಯ ಮಾಡಿಲ್ಲ ಅಂತ ನೊಂದು ಆಕ್ರೋಶ ವ್ಯಕ್ತಪಡಿಸಿದ ನಿರ್ಗತಿಕರು.
ಇನ್ನಾದರೂ ಎಚ್ಚೆತ್ತು ಇವರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುವರೆ ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು