8:34 PM Sunday15 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಕ್ರೈಸ್ತ ಸಮುದಾಯದ ಪರಮೋಚ್ಛ ಧಾರ್ಮಿಕ ನಾಯಕ ಪೋಪ್ ಫ್ರಾನ್ಸಿಸ್ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ವಿಶ್ವದ ಹಲವು ಗಣ್ಯರ ಸಂತಾಪ

21/04/2025, 16:59

ವ್ಯಾಟಿಕನ್ ಸಿಟಿ (reporterkarnataka.com): ವಿನಮ್ರತೆ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಪೋಪ್ ಫ್ರಾನ್ಸಿಸ್ ಸೋಮವಾರ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಹಿತ ವಿಶ್ವದ ಹಲವು ಗಣ್ಯರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.


88ರ ಹರೆಯದ ಪೋಪ್ ಅವರು 12 ವರ್ಷಗಳ ಕಾಲ ಪೋಪ್ ಪಟ್ಟವನ್ನು ಅಲಂಕರಿಸಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಇತ್ತೀಚೆಗೆ ನ್ಯುಮೋನಿಯಾ ಪೀಡಿತರಾಗಿ ಗುಣಮುಖ ಹೊಂದಿದ್ದರು.
ಲ್ಯಾಟಿನ್ ಅಮೆರಿಕದಿಂದ ಪೋಪ್ ಪಟ್ಟವೇರಿದ ಮೊದಲಿಗರು ಅವರಾಗಿದ್ದಾರೆ.
ಅವರ ತಮ್ಮ ಸಂಪೂರ್ಣ ಜೀವನವನ್ನು ಭಗವಂತ ಮತ್ತು ಚರ್ಚ್‌ನ ಸೇವೆಗೆ ಸಮರ್ಪಿಸಿದ್ದರು.
“ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಪವಿತ್ರ ಫಾದರ್ ಫ್ರಾನ್ಸಿಸ್ ಅವರ ಮರಣವನ್ನು ನಾನು ತೀವ್ರ ದುಃಖದಿಂದ ಘೋಷಿಸಬೇಕಾಗಿದೆ” ಎಂದು ಕಾರ್ಡಿನಲ್ ಕೆವಿನ್ ಫಾರೆಲ್ ವ್ಯಾಟಿಕನ್‌ನ ಟಿವಿ ಚಾನೆಲ್‌ನಲ್ಲಿ ಘೋಷಿಸಿದ್ದಾರೆ.
ಅವರು ಈಸ್ಟರ್ ಸೋಮವಾರದಂದು ನಿಧನರಾದರು, ಈಸ್ಟರ್ ಭಾನುವಾರದಂದು ವ್ಯಾಟಿಕನ್‌ನಲ್ಲಿ ಭಕ್ತರ ಗುಂಪನ್ನು ಸಂತ ಪೀಟರ್ಸ್ ಬೆಸಿಲಿಕಾದಲ್ಲಿ ಬಾಲ್ಕನಿಯಲ್ಲಿ ಕಾಣಿಸಿಕೊಂಡು ಸಂತೋಷಪಡಿಸಿದ ಒಂದು ದಿನದ ನಂತರ ಮರಣ ಹೊಂದಿದರು.
ಇತ್ತೀಚಿಗೆ ಅಸ್ವಸ್ಥರಾದ ಪೋಪ್ ಫ್ರಾನ್ಸಿಸ್ ಅವರನ್ನು
ಫೆಬ್ರವರಿ 14ರಂದು ಬ್ರಾಂಕೈಟಿಸ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರದ ದಿನಗಳಲ್ಲಿ, ಪೋಪ್ ಅವರಿಗೆ ಡಬ್ಬಲ್ ನ್ಯುಮೋನಿಯಾ ಇರುವುದು ಪತ್ತೆಯಾಯಿತು. ನಂತರ ಗುಣಮುಖರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು