9:56 AM Monday19 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

ಕ್ರೈಸ್ತ ಸಮುದಾಯದ ಪರಮೋಚ್ಛ ಧಾರ್ಮಿಕ ನಾಯಕ ಪೋಪ್ ಫ್ರಾನ್ಸಿಸ್ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ವಿಶ್ವದ ಹಲವು ಗಣ್ಯರ ಸಂತಾಪ

21/04/2025, 16:59

ವ್ಯಾಟಿಕನ್ ಸಿಟಿ (reporterkarnataka.com): ವಿನಮ್ರತೆ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಪೋಪ್ ಫ್ರಾನ್ಸಿಸ್ ಸೋಮವಾರ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಹಿತ ವಿಶ್ವದ ಹಲವು ಗಣ್ಯರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.


88ರ ಹರೆಯದ ಪೋಪ್ ಅವರು 12 ವರ್ಷಗಳ ಕಾಲ ಪೋಪ್ ಪಟ್ಟವನ್ನು ಅಲಂಕರಿಸಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಇತ್ತೀಚೆಗೆ ನ್ಯುಮೋನಿಯಾ ಪೀಡಿತರಾಗಿ ಗುಣಮುಖ ಹೊಂದಿದ್ದರು.
ಲ್ಯಾಟಿನ್ ಅಮೆರಿಕದಿಂದ ಪೋಪ್ ಪಟ್ಟವೇರಿದ ಮೊದಲಿಗರು ಅವರಾಗಿದ್ದಾರೆ.
ಅವರ ತಮ್ಮ ಸಂಪೂರ್ಣ ಜೀವನವನ್ನು ಭಗವಂತ ಮತ್ತು ಚರ್ಚ್‌ನ ಸೇವೆಗೆ ಸಮರ್ಪಿಸಿದ್ದರು.
“ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಪವಿತ್ರ ಫಾದರ್ ಫ್ರಾನ್ಸಿಸ್ ಅವರ ಮರಣವನ್ನು ನಾನು ತೀವ್ರ ದುಃಖದಿಂದ ಘೋಷಿಸಬೇಕಾಗಿದೆ” ಎಂದು ಕಾರ್ಡಿನಲ್ ಕೆವಿನ್ ಫಾರೆಲ್ ವ್ಯಾಟಿಕನ್‌ನ ಟಿವಿ ಚಾನೆಲ್‌ನಲ್ಲಿ ಘೋಷಿಸಿದ್ದಾರೆ.
ಅವರು ಈಸ್ಟರ್ ಸೋಮವಾರದಂದು ನಿಧನರಾದರು, ಈಸ್ಟರ್ ಭಾನುವಾರದಂದು ವ್ಯಾಟಿಕನ್‌ನಲ್ಲಿ ಭಕ್ತರ ಗುಂಪನ್ನು ಸಂತ ಪೀಟರ್ಸ್ ಬೆಸಿಲಿಕಾದಲ್ಲಿ ಬಾಲ್ಕನಿಯಲ್ಲಿ ಕಾಣಿಸಿಕೊಂಡು ಸಂತೋಷಪಡಿಸಿದ ಒಂದು ದಿನದ ನಂತರ ಮರಣ ಹೊಂದಿದರು.
ಇತ್ತೀಚಿಗೆ ಅಸ್ವಸ್ಥರಾದ ಪೋಪ್ ಫ್ರಾನ್ಸಿಸ್ ಅವರನ್ನು
ಫೆಬ್ರವರಿ 14ರಂದು ಬ್ರಾಂಕೈಟಿಸ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರದ ದಿನಗಳಲ್ಲಿ, ಪೋಪ್ ಅವರಿಗೆ ಡಬ್ಬಲ್ ನ್ಯುಮೋನಿಯಾ ಇರುವುದು ಪತ್ತೆಯಾಯಿತು. ನಂತರ ಗುಣಮುಖರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು