5:01 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ಯಾತ್ರೆ ನಾಳೆ ಬೆಳಗ್ಗೆ 6ರಿಂದ: 10.30ರೊಳಗೆ ಅಂತ್ಯಕ್ರಿಯೆ

30/10/2021, 21:38

ಬೆಂಗಳೂರು(reporterkarnataka.com) ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಮೆರವಣಿಗೆ ನಾಳೆ ಬೆಳಿಗ್ಗೆ 6ರಿಂದ ಆರಂಭವಾಗಲಿದ್ದು, 10.30ರೊಳಗೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಈ ಕುರಿತಂತೆ ರಾಜ್‌ ಕುಟುಂಬದ ಆಪ್ತರಾದ ಸಾ.ರಾ ಗೋವಿಂದ್‌ ಅವರು ಮಾಹಿತಿ ನೀಡಿದ್ದಾರೆ.

ನಾಳೆ ಬೆಳಿಗ್ಗೆ 6 ಗಂಟೆಯಿಂದ ಪಾರ್ಥೀವ ಶರೀರದ ಮೆರವಣಿಗೆ ಆರಂಭವಾಗಲಿದೆ. ಕೆ.ಆರ್. ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್ ಮೂಲಕ, ಯಶವಂತಪುರ, ಆರ್ ಎಂ ಸಿ ಯಾರ್ಡ್, ಗೋರಗುಂಟೆಪಾಳ್ಯದ ಮೂಲಕ ಕಂಠೀರವ ಸ್ಟುಡಿಯೋವನ್ನು ತಲುಪಲಿದೆ. ಇನ್ನು ಬೆಳಿಗ್ಗೆ 10.30ರೊಳಗೆ ಕಂಠೀರವ ಸ್ಟುಡೀಯೋದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ ನೆರವೇರಿಲಿದೆ ಎಂದು ಗೋವಿಂದ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು