11:41 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಸಹಿತ ಹಲವು ಗಣ್ಯರ ಸಂತಾಪ

29/10/2021, 18:07

ಬೆಂಗಳೂರು(reporterkarnataka.com): ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್​ ಸಾವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಮಧ್ಯೆ ಪುನೀತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಕಂಠೀರವ ಸ್ಟುಡಿಯೋದಲ್ಲಿ ಸಂಜೆ 6ರಿಂದ ಆರಂಭವಾಗಲಿದೆ.

ಪ್ರಧಾನಿ ಮೋದಿ ಹಾಗೂ ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ತೀವ್ರ ಹೃದಯಘಾತಕ್ಕೀಡಾದ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಕರೆದೊಯ್ಯುಷ್ಟರಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದರು. ಬೆಳಗ್ಗೆ ಸುಮಾರು 11.30ರ ವೇಳೆಗೆ ಪುನೀತ್ ಅವರು ಇಹಲೋಕ ತ್ಯಜಿಸಿದ್ದಾರೆ.

ಪುನೀತ್ ಅವರ ನೇತ್ರ ದಾನ ಮಾಡಲಾಗಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪಾರ್ಥಿವ ಶರೀರ ಇಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು