1:50 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಗಲಿಗೆ ಕೈ ಹಾಕಿದ ಲಾರ್ಡ್ ಗಣೇಶ!: ಕಾಫಿನಾಡಿನಲ್ಲಿ ಭಾರೀ ಬೇಡಿಕೆ

30/08/2022, 09:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಲಾರ್ಡ್ ಗಣೇಶ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೆಗಲ ಮೇಲೆ ಕೈಹಾಕಿ ನಿಂತಿರೋ ಗಣೇಶನ ಮೂರ್ತಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಭಾರೀ ಬೇಡಿಕೆ ಬಂದಿದೆ. 


ತರೀಕೆರೆ ಪಟ್ಟಣದ ಕುಂಬಾರ ಬೀದಿಯಲ್ಲಿ ಹತ್ತಾರು ವರ್ಷಗಳಿಂದ ನಾನಾ ರೀತಿಯ ಗಣಪತಿ ಮೂರ್ತಿಯನ್ನ ಮಾಡುತ್ತಿದ್ದಾರೆ. ಈ ವರ್ಷ ಪುನೀತ್ ಅಗಲಿಕೆಯಿಂದ ಅವರ ಅಭಿಮಾನಿಯ ಆದ ಕಲಾವಿದ ಚಂದ್ರು ಹಾಗೂ ಪ್ರಸನ್ನ ಎಂಬುವರು ಈ ಅದ್ಭುತ ಮೂರ್ತಿಯನ್ನ ನಿರ್ಮಿಸಿದ್ದಾರೆ. ತರೀಕೆರೆ ಪಟ್ಟಣದ ಮೋಹಿತ್ ಕುಮಾರ್ ಎಂಬುವರು ಈ ಮೂರ್ತಿಯನ್ನ ಹೇಳಿ ಮಾಡಿಸಿದ್ದಾರೆ. ಗಣೇಶನ ಜೊತೆ ಪುನೀತ್ ಕುಮಾರ್ ನಿಂತಿದ್ದು, ಗಣೇಶ ಅಪ್ಪುವಿನ ಹೆಗಲ ಮೇಲೆ ಕೈಹಾಕಿದ್ದಾನೆ. ಈ ಮೂರ್ತಿ ಭಾರೀ ಬೇಡಿಕೆ ಪಡೆದುಕೊಂಡಿದೆ. ಗಣಪತಿ ಮಾಡುವ ಸ್ಥಳಕ್ಕೆ ಬಂದು ಇದನ್ನ ನೋಡುವ ಎಲ್ಲಾ ಯುವಕರು ಈ ಮೂರ್ತಿ ನಮಗೆ ಬೇಕು ಕೊಡಿ ಎಂದು ಕೇಳುತ್ತಿದ್ದಾರೆ. ಸುಮಾರು 10 ಸಾವಿರ ಮೌಲ್ಯದ ಈ ಗಣಪತಿಗೆ ಮೋಹಿತ್ ಕುಮಾರ್ ಅಡ್ವಾನ್ಸ್ ಆಗಿ ಹಣವನ್ನೂ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡುತ್ತಿರುವ ಯುವಕರು 15-20 ಸಾವಿರ ಕೊಡುತ್ತೇವೆ ಎಂದು ಕೇಳುತ್ತಿದ್ದಾರೆ. ಆದರೆ, ಚಂದ್ರು ಅವರು ಇದನ್ನ ಯಾರಿಗೂ ನೀಡಿಲ್ಲ. ಇನ್ನೂ ತರೀಕೆರೆ ಪಟ್ಟಣದ ಕುಂಬಾರಬೀದಿಯ ಪುಟ್ಟಣ್ಣ ಎಂಬ ಕಲಾವಿದ ಕೂಡ ಗಣಪತಿ ಜೊತೆ ಅಪ್ಪು ಇರುವ ಮೂರ್ತಿ ಕೂಡ ಮಾಡಿದ್ದು ಈ ಮೂರ್ತಿ ಕೂಡ ಅದ್ಭುತವಾಗಿ ಮೂಡಿ ಬಂದಿದೆ. ಗಣಪತಿಯ ಎಡೆಭಾಗದಲ್ಲಿ ಗೌರಿ ಇರುವಂತೆ ಸ್ಥಳ ಬಿಟ್ಟಿದ್ದು ಬಲಭಾಗದಲ್ಲಿ ಪುನೀತ್ ರಾಜ್ ಕುಮಾರ್ ಇರುವಂತೆ ಮೂರ್ತಿಯನ್ನ ರಚಿಸಿದ್ದಾರೆ. ಹತ್ತಾರು ವರ್ಷಗಳಿಂದ ಗಣಪತಿ ಮೂರ್ತಿ ಮಾಡಿಕೊಂಡು ಬರುತ್ತಿರುವ ಈ ಕಲಾವಿದರ ಈ ವರ್ಷದ ಅಪ್ಪು ಮೂರ್ತಿಗೆ ಭಾರೀ ಬೇಡಿಕೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು