7:38 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಗಲಿಗೆ ಕೈ ಹಾಕಿದ ಲಾರ್ಡ್ ಗಣೇಶ!: ಕಾಫಿನಾಡಿನಲ್ಲಿ ಭಾರೀ ಬೇಡಿಕೆ

30/08/2022, 09:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಲಾರ್ಡ್ ಗಣೇಶ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೆಗಲ ಮೇಲೆ ಕೈಹಾಕಿ ನಿಂತಿರೋ ಗಣೇಶನ ಮೂರ್ತಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಭಾರೀ ಬೇಡಿಕೆ ಬಂದಿದೆ. 


ತರೀಕೆರೆ ಪಟ್ಟಣದ ಕುಂಬಾರ ಬೀದಿಯಲ್ಲಿ ಹತ್ತಾರು ವರ್ಷಗಳಿಂದ ನಾನಾ ರೀತಿಯ ಗಣಪತಿ ಮೂರ್ತಿಯನ್ನ ಮಾಡುತ್ತಿದ್ದಾರೆ. ಈ ವರ್ಷ ಪುನೀತ್ ಅಗಲಿಕೆಯಿಂದ ಅವರ ಅಭಿಮಾನಿಯ ಆದ ಕಲಾವಿದ ಚಂದ್ರು ಹಾಗೂ ಪ್ರಸನ್ನ ಎಂಬುವರು ಈ ಅದ್ಭುತ ಮೂರ್ತಿಯನ್ನ ನಿರ್ಮಿಸಿದ್ದಾರೆ. ತರೀಕೆರೆ ಪಟ್ಟಣದ ಮೋಹಿತ್ ಕುಮಾರ್ ಎಂಬುವರು ಈ ಮೂರ್ತಿಯನ್ನ ಹೇಳಿ ಮಾಡಿಸಿದ್ದಾರೆ. ಗಣೇಶನ ಜೊತೆ ಪುನೀತ್ ಕುಮಾರ್ ನಿಂತಿದ್ದು, ಗಣೇಶ ಅಪ್ಪುವಿನ ಹೆಗಲ ಮೇಲೆ ಕೈಹಾಕಿದ್ದಾನೆ. ಈ ಮೂರ್ತಿ ಭಾರೀ ಬೇಡಿಕೆ ಪಡೆದುಕೊಂಡಿದೆ. ಗಣಪತಿ ಮಾಡುವ ಸ್ಥಳಕ್ಕೆ ಬಂದು ಇದನ್ನ ನೋಡುವ ಎಲ್ಲಾ ಯುವಕರು ಈ ಮೂರ್ತಿ ನಮಗೆ ಬೇಕು ಕೊಡಿ ಎಂದು ಕೇಳುತ್ತಿದ್ದಾರೆ. ಸುಮಾರು 10 ಸಾವಿರ ಮೌಲ್ಯದ ಈ ಗಣಪತಿಗೆ ಮೋಹಿತ್ ಕುಮಾರ್ ಅಡ್ವಾನ್ಸ್ ಆಗಿ ಹಣವನ್ನೂ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡುತ್ತಿರುವ ಯುವಕರು 15-20 ಸಾವಿರ ಕೊಡುತ್ತೇವೆ ಎಂದು ಕೇಳುತ್ತಿದ್ದಾರೆ. ಆದರೆ, ಚಂದ್ರು ಅವರು ಇದನ್ನ ಯಾರಿಗೂ ನೀಡಿಲ್ಲ. ಇನ್ನೂ ತರೀಕೆರೆ ಪಟ್ಟಣದ ಕುಂಬಾರಬೀದಿಯ ಪುಟ್ಟಣ್ಣ ಎಂಬ ಕಲಾವಿದ ಕೂಡ ಗಣಪತಿ ಜೊತೆ ಅಪ್ಪು ಇರುವ ಮೂರ್ತಿ ಕೂಡ ಮಾಡಿದ್ದು ಈ ಮೂರ್ತಿ ಕೂಡ ಅದ್ಭುತವಾಗಿ ಮೂಡಿ ಬಂದಿದೆ. ಗಣಪತಿಯ ಎಡೆಭಾಗದಲ್ಲಿ ಗೌರಿ ಇರುವಂತೆ ಸ್ಥಳ ಬಿಟ್ಟಿದ್ದು ಬಲಭಾಗದಲ್ಲಿ ಪುನೀತ್ ರಾಜ್ ಕುಮಾರ್ ಇರುವಂತೆ ಮೂರ್ತಿಯನ್ನ ರಚಿಸಿದ್ದಾರೆ. ಹತ್ತಾರು ವರ್ಷಗಳಿಂದ ಗಣಪತಿ ಮೂರ್ತಿ ಮಾಡಿಕೊಂಡು ಬರುತ್ತಿರುವ ಈ ಕಲಾವಿದರ ಈ ವರ್ಷದ ಅಪ್ಪು ಮೂರ್ತಿಗೆ ಭಾರೀ ಬೇಡಿಕೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು