12:02 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಗಲಿಗೆ ಕೈ ಹಾಕಿದ ಲಾರ್ಡ್ ಗಣೇಶ!: ಕಾಫಿನಾಡಿನಲ್ಲಿ ಭಾರೀ ಬೇಡಿಕೆ

30/08/2022, 09:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಲಾರ್ಡ್ ಗಣೇಶ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೆಗಲ ಮೇಲೆ ಕೈಹಾಕಿ ನಿಂತಿರೋ ಗಣೇಶನ ಮೂರ್ತಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಭಾರೀ ಬೇಡಿಕೆ ಬಂದಿದೆ. 


ತರೀಕೆರೆ ಪಟ್ಟಣದ ಕುಂಬಾರ ಬೀದಿಯಲ್ಲಿ ಹತ್ತಾರು ವರ್ಷಗಳಿಂದ ನಾನಾ ರೀತಿಯ ಗಣಪತಿ ಮೂರ್ತಿಯನ್ನ ಮಾಡುತ್ತಿದ್ದಾರೆ. ಈ ವರ್ಷ ಪುನೀತ್ ಅಗಲಿಕೆಯಿಂದ ಅವರ ಅಭಿಮಾನಿಯ ಆದ ಕಲಾವಿದ ಚಂದ್ರು ಹಾಗೂ ಪ್ರಸನ್ನ ಎಂಬುವರು ಈ ಅದ್ಭುತ ಮೂರ್ತಿಯನ್ನ ನಿರ್ಮಿಸಿದ್ದಾರೆ. ತರೀಕೆರೆ ಪಟ್ಟಣದ ಮೋಹಿತ್ ಕುಮಾರ್ ಎಂಬುವರು ಈ ಮೂರ್ತಿಯನ್ನ ಹೇಳಿ ಮಾಡಿಸಿದ್ದಾರೆ. ಗಣೇಶನ ಜೊತೆ ಪುನೀತ್ ಕುಮಾರ್ ನಿಂತಿದ್ದು, ಗಣೇಶ ಅಪ್ಪುವಿನ ಹೆಗಲ ಮೇಲೆ ಕೈಹಾಕಿದ್ದಾನೆ. ಈ ಮೂರ್ತಿ ಭಾರೀ ಬೇಡಿಕೆ ಪಡೆದುಕೊಂಡಿದೆ. ಗಣಪತಿ ಮಾಡುವ ಸ್ಥಳಕ್ಕೆ ಬಂದು ಇದನ್ನ ನೋಡುವ ಎಲ್ಲಾ ಯುವಕರು ಈ ಮೂರ್ತಿ ನಮಗೆ ಬೇಕು ಕೊಡಿ ಎಂದು ಕೇಳುತ್ತಿದ್ದಾರೆ. ಸುಮಾರು 10 ಸಾವಿರ ಮೌಲ್ಯದ ಈ ಗಣಪತಿಗೆ ಮೋಹಿತ್ ಕುಮಾರ್ ಅಡ್ವಾನ್ಸ್ ಆಗಿ ಹಣವನ್ನೂ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡುತ್ತಿರುವ ಯುವಕರು 15-20 ಸಾವಿರ ಕೊಡುತ್ತೇವೆ ಎಂದು ಕೇಳುತ್ತಿದ್ದಾರೆ. ಆದರೆ, ಚಂದ್ರು ಅವರು ಇದನ್ನ ಯಾರಿಗೂ ನೀಡಿಲ್ಲ. ಇನ್ನೂ ತರೀಕೆರೆ ಪಟ್ಟಣದ ಕುಂಬಾರಬೀದಿಯ ಪುಟ್ಟಣ್ಣ ಎಂಬ ಕಲಾವಿದ ಕೂಡ ಗಣಪತಿ ಜೊತೆ ಅಪ್ಪು ಇರುವ ಮೂರ್ತಿ ಕೂಡ ಮಾಡಿದ್ದು ಈ ಮೂರ್ತಿ ಕೂಡ ಅದ್ಭುತವಾಗಿ ಮೂಡಿ ಬಂದಿದೆ. ಗಣಪತಿಯ ಎಡೆಭಾಗದಲ್ಲಿ ಗೌರಿ ಇರುವಂತೆ ಸ್ಥಳ ಬಿಟ್ಟಿದ್ದು ಬಲಭಾಗದಲ್ಲಿ ಪುನೀತ್ ರಾಜ್ ಕುಮಾರ್ ಇರುವಂತೆ ಮೂರ್ತಿಯನ್ನ ರಚಿಸಿದ್ದಾರೆ. ಹತ್ತಾರು ವರ್ಷಗಳಿಂದ ಗಣಪತಿ ಮೂರ್ತಿ ಮಾಡಿಕೊಂಡು ಬರುತ್ತಿರುವ ಈ ಕಲಾವಿದರ ಈ ವರ್ಷದ ಅಪ್ಪು ಮೂರ್ತಿಗೆ ಭಾರೀ ಬೇಡಿಕೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು