3:30 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ 4ನೇ ದರೂರ ಶಾಖೆ ಉದ್ಘಾಟನೆ

08/01/2023, 19:12

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಅಂಕಲಿ 49 ನೇ ದರೂರ ಶಾಖೆ ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಇದೆ ವೇಳೆ ಮಾತನಾಡಿದ ಅಮಿತ ಪ್ರಭಾಕರ ಕೋರೆ, ನಮ್ಮ ಕಾರ್ಖಾನೆಗೆ ಇಲ್ಲಿಂದ ಕಬ್ಬು ಬರುವುದರಿಂದ ರೈತರಿಗೆ ಅನುಕೂಲ ಆಗಲಿ ಎಂದು ದರೂರ್ ಶಾಖೆಯನ್ನು ಪ್ರಾರಭಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳಬೇಕು ಎಂದರು.

ನಂತರ ಮಾತನಾಡಿದ ಲಕ್ಷ್ಮಣ ಸಂಗಪ್ಪ ಸವದಿ ಅವರು, ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಸಾಗುತ್ತಿರುವ ಈ ಸಹಕಾರಿ ಬ್ಯಾಂಕಿಗೆ ಜನರ ಅಪಾರ ನಂಬಿಕೆ ಇದ್ದು ಈ ಸಹಕಾರಿ ಸಾಮಿತ್ಯದ ಬ್ಯಾಂಕ್ ಎತ್ತರಕ್ಕೆ ಬೆಳೆಯಲಿ ಮತ್ತು ಕೆ ಎಲ್ ಇ ಸಂಸ್ಥೆಯು ಕರ್ನಾಟಕ ಮಾತ್ರ ಸೀಮಿತವಾಗಿ ಇರದೇ ಹೊರ ದೇಶಕ್ಕೆ ತನ್ನ ಅಂಗ ಸಂಸ್ಥೆಗಳನ್ನು ರಚಿಸಿ ದೇಶವ್ಯಾಪಿ ಹೆಸರು ಮಾಡಿದೆ ಎಂದು ಹಾರೈಸಿದರು‌.
ದೇಶದಲ್ಲಿ ಏತನಾಲ್ ಉತ್ಪಾದನೆ ಹೆಚ್ಚಾಗುವುದರಿಂದ ಮುಂಬರುವ ದಿನಗಳಲ್ಲಿ ಕಬ್ಬು ಭತ್ತ, ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ದೊರೆಯಲಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದರು.


ಇದೇ ವೇಳೆ ಲಕ್ಷ್ಮಣ ಸಂಗಪ್ಪ ಸವದಿ, ಅಮಿತ ಪ್ರಭಾಕರ ಕೋರೆ, ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಚಿಕ್ಕೋಡಿ
ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳ ನಿ ಹೊಸದೆಹಲಿ ಸಿದಗೊಂಡ ಭೀ. ಗುಮತಾಜ ಪ್ರಧಾನ ವ್ಯವಸ್ಥಾಪಕರು
ಹಾಗೂ ದಿಗ್ಧರ್ಶಕರು, ಸದಸ್ಯರು, ಸಿಬ್ಬಂದಿ ವರ್ಗ, ಸಮಸ್ತ ದರೂರು ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು