11:15 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಪ್ರಚೋದನಕಾರಿ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲು

08/10/2021, 22:19

ಮಂಗಳೂರು(reporterkarnataka.com):

ಸುರತ್ಕಲ್‌ನಲ್ಲಿ ಬಜರಂಗದಳ ಹಾಗೂ ದುರ್ಗಾವಾಹಿನಿಯಿಂದ ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ
ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದು, ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲಾಗಿದೆ.

ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.

ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತಾರೆ.
ಮುಸ್ಲಿಂ ಹೆಣ್ಣು ಮಕ್ಕಳಿಗೆ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಇದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು