9:09 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪ್ರಚೋದನಕಾರಿ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲು

08/10/2021, 22:19

ಮಂಗಳೂರು(reporterkarnataka.com):

ಸುರತ್ಕಲ್‌ನಲ್ಲಿ ಬಜರಂಗದಳ ಹಾಗೂ ದುರ್ಗಾವಾಹಿನಿಯಿಂದ ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ
ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದು, ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲಾಗಿದೆ.

ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.

ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತಾರೆ.
ಮುಸ್ಲಿಂ ಹೆಣ್ಣು ಮಕ್ಕಳಿಗೆ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಇದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು