1:24 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಪ್ರಚೋದನಕಾರಿ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲು

08/10/2021, 22:19

ಮಂಗಳೂರು(reporterkarnataka.com):

ಸುರತ್ಕಲ್‌ನಲ್ಲಿ ಬಜರಂಗದಳ ಹಾಗೂ ದುರ್ಗಾವಾಹಿನಿಯಿಂದ ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ
ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದು, ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲಾಗಿದೆ.

ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.

ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತಾರೆ.
ಮುಸ್ಲಿಂ ಹೆಣ್ಣು ಮಕ್ಕಳಿಗೆ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಇದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು