11:00 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪ: ಸೆನ್ ಠಾಣೆಯಲ್ಲಿ‌ ವ್ಯಕ್ತಿಯ ವಿರುದ್ಧ ಕೇಸ್ ದಾಖಲು

05/08/2022, 11:22

ಬೈಂದೂರು(reporterkarnataka.com):ಮಂಗಳೂರು ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬೈಂದೂರಿನ ವ್ಯಕ್ತಿಯೋರ್ವರ ಮೇಲೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರ ಆತನ ಫೇಸ್ ಬುಕ್ ಖಾತೆಯಲ್ಲಿ ಮಂಗಳೂರಿನಲ್ಲಿ ಕೊಲೆಯಾಗಿ ಮೃತಪಟ್ಟಿರುವ ಪ್ರವೀಣ್ ಎಂಬಾತನ ಫೋಟೋವನ್ನು ಬಳಸಿ ಒಂದು ಕೊಲೆಗೆ ಪ್ರತಿಕಾರ ಹೇಗಿತ್ತು ಎಂಬುದಾಗಿ ಪ್ರಚೋದನಾಕಾರಿ  ಬರಹವನ್ನು ಬರೆದು ಪೋಸ್ಟ್ ಮಾಡಿರುವುದು ಹಾಗೂ ದಿನಪತ್ರಿಕೆಯಲ್ಲಿ ಬಂದಿರುವ ಮಂಗಳೂರಿನಲ್ಲಿ ನಡೆದ ಫಾಜಿಲ್  ಹತ್ಯೆಯ ಆರೋಪಿಗಳ ಫೋಟೋವನ್ನು ಬಳಸಿ, “ ಇವತ್ತಿನ ಹೀರೋಗಳು ” ಎಂಬ ಬರಹವನ್ನು ಬರೆದು ಪೋಸ್ಟ್ ಮಾಡಿದ್ದು, ಈ ರೀತಿಯಾಗಿ ಸುಳ್ಳು, ಪ್ರಚೋದನಾಕಾರಿ ಹಾಗೂ ಕೋಮು ಪ್ರಚೋದನೆ ಪೋಸ್ಟ್ ನ್ನು ಹರಿಯಬಿಟ್ಟಿರುವುದು ಕಂಡುಬಂದಿದ್ದು ಈತನ ವಿರುದ್ದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನ ಅನ್ವಯ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು