1:24 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪ: ಸೆನ್ ಠಾಣೆಯಲ್ಲಿ‌ ವ್ಯಕ್ತಿಯ ವಿರುದ್ಧ ಕೇಸ್ ದಾಖಲು

05/08/2022, 11:22

ಬೈಂದೂರು(reporterkarnataka.com):ಮಂಗಳೂರು ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬೈಂದೂರಿನ ವ್ಯಕ್ತಿಯೋರ್ವರ ಮೇಲೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರ ಆತನ ಫೇಸ್ ಬುಕ್ ಖಾತೆಯಲ್ಲಿ ಮಂಗಳೂರಿನಲ್ಲಿ ಕೊಲೆಯಾಗಿ ಮೃತಪಟ್ಟಿರುವ ಪ್ರವೀಣ್ ಎಂಬಾತನ ಫೋಟೋವನ್ನು ಬಳಸಿ ಒಂದು ಕೊಲೆಗೆ ಪ್ರತಿಕಾರ ಹೇಗಿತ್ತು ಎಂಬುದಾಗಿ ಪ್ರಚೋದನಾಕಾರಿ  ಬರಹವನ್ನು ಬರೆದು ಪೋಸ್ಟ್ ಮಾಡಿರುವುದು ಹಾಗೂ ದಿನಪತ್ರಿಕೆಯಲ್ಲಿ ಬಂದಿರುವ ಮಂಗಳೂರಿನಲ್ಲಿ ನಡೆದ ಫಾಜಿಲ್  ಹತ್ಯೆಯ ಆರೋಪಿಗಳ ಫೋಟೋವನ್ನು ಬಳಸಿ, “ ಇವತ್ತಿನ ಹೀರೋಗಳು ” ಎಂಬ ಬರಹವನ್ನು ಬರೆದು ಪೋಸ್ಟ್ ಮಾಡಿದ್ದು, ಈ ರೀತಿಯಾಗಿ ಸುಳ್ಳು, ಪ್ರಚೋದನಾಕಾರಿ ಹಾಗೂ ಕೋಮು ಪ್ರಚೋದನೆ ಪೋಸ್ಟ್ ನ್ನು ಹರಿಯಬಿಟ್ಟಿರುವುದು ಕಂಡುಬಂದಿದ್ದು ಈತನ ವಿರುದ್ದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನ ಅನ್ವಯ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು