4:41 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ ಪ್ರತಿಭಟನೆ

17/09/2021, 17:57

ಮಂಗಳೂರು(reporterkarnataka.com); ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧ ಬಳಿ ಶೂ ಪಾಲೀಸ್,ಟೀ ಸ್ಟಾಲ್, ಪಕೋಡ ಸ್ಟಾಲ್ ತೆರೆದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.ಮೋದಿ ಜನ್ಮದಿನಾಚರಣೆಯನ್ನು‘ರಾಷ್ಟ್ರೀಯ ನಿರುದ್ಯೋಗ’ ದಿನವಾಗಿ ಆಚರಿಸಲು ರಾಷ್ಟ್ರೀಯ ಯುವ ಕಾಂಗ್ರೆಸ್ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ  ಶುಕ್ರವಾರ ಸಂಜೆ 3.00 ಗಂಟೆಗೆ ಮಂಗಳೂರಿನ ಮಿನಿ ವಿಧಾನ ಸೌಧ ಬಳಿ ಟಿ ಸ್ಟಾಲ್’, ‘ಶೂ ಪಾಲೀಸ್’, ‘ಪಕೋಡ ಸ್ಟಾಲ್’ ತೆರದು ಅಣುಕು ಪ್ರದರ್ಶನ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 


ಈ ಸಂದರ್ಭದಲ್ಲಿ ಮಾಜಿ  ಸಚಿವ ಬಿ.  ರಮಾನಾಥ ರೈ  ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆಯ ಬಗ್ಗೆ ವಿವರಿಸಿದರು. ಉದ್ಯೋಗ ಸೃಷ್ಟಿಗೆ ಅವರು ಒತ್ತಾಯಿಸಿದರು.  ಈ ವೇಳೆ ವೀ ವಾಂಟ್ ಎಂಪ್ಲ್ಯಾ ಮೆಂಟ್ ಎಂದು ಘೋಷಣೆಯ ಬೋರ್ಡ್ ಅಳವಡಿಸಿದಿದ್ದರು.


ಪ್ರತಿಭಟನಾ ನಿರತರು ವಾಹನ ಗಳನ್ನು ನಿಲ್ಲಿಸಿ ಉಚಿತ ಪಕೋಡ ನೀಡಿ ಪ್ರಧಾನಿ ಹುಟ್ಟುಹಬ್ಬವನ್ನು ಆಚರಣೆಯನ್ನು ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು