8:26 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ: ಮೇಕೆದಾಟು ಯೋಜನೆ ಪ್ರಸ್ತಾಪ, ತಮಿಳುನಾಡು ತಕರಾರು ಬಗ್ಗೆ ಆಕ್ಷೇಪ

17/07/2021, 14:53

ನವದೆಹಲಿ(reporterkarnataka news): ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಶುಕ್ರವಾರ ದೆಹಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳು ವಿಶೇಷವಾಗಿ ಮೇಕೆದಾಟು ಯೋಜನೆ ಬಗ್ಗೆ ಮುಖ್ಯಮಂತ್ರಿ ಅವರು ಪ್ರಧಾನಿ ಜತೆ ಚರ್ಚಿಸಿದರು ಎಂದು ತಿಳಿದು ಬಂದಿದೆ.

ಶುಕ್ರವಾರ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಂಜೆ 6.30ರ ವೇಳೆಗೆ ಸಮಯ ನಿಗದಿಪಡಿಸಲಾಗಿತ್ತು. ಪ್ರಧಾನಿ ಅವರನ್ನು ಭೇಟಿಯಾದ ಯಡಿಯೂರಪ್ಪ ಅವರು ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಅಡ್ಡಿ ಪಡಿಸುತ್ತಿರುವ ಬಗ್ಗೆ ಮೋದಿ ಅವರ ಗಮನಕ್ಕೆ ತಂದರು ಎಂದು ತಿಳಿದು ಬಂದಿದೆ. ಮೇಕೆದಾಟು ಯೋಜನೆಯ ಶಂಕುಸ್ಥಾಪನೆಗೆ ಸ್ವತಃ ಪ್ರಧಾನಿಯನ್ನೇ ಮುಖ್ಯಮಂತ್ರಿ ಆಹ್ವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು