3:16 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಪ್ರಧಾನಿ ಭದ್ರತೆಯಲ್ಲಿ ಮತ್ತೆ ಲೋಪ: ಹೆಲಿಕಾಪ್ಟರ್ ಬಳಿ ಹಾರಿ ಬಂದ ಪ್ರತಿಭಟನಾಕಾರರ ಬಲೂನ್

05/07/2022, 09:05

ವಿಜಯವಾಡ(reporterkarnataka.com):ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪವಾಗಿದೆ.

ಈ ಹಿಂದೆ ಪಂಜಾಬ್‌ನಲ್ಲಿ ಭದ್ರತಾ ಲೋಪದ ಬಳಿಕ ಇದೀಗ ಮತ್ತೆ ಆಂಧ್ರಪ್ರದೇಶದಲ್ಲಿ ಇದೇ ರೀತಿ ಘಟನೆ ನಡೆದಿದ್ದು, ಪ್ರಧಾನಿ ಮೋದಿಯ ಹೆಲಿಕಾಪ್ಟರ್ ಸನಿಹದಲ್ಲಿ ಪ್ರತಿಭಟನಕಾರರ ಬಲೂನ್ ಹಾರಿ ಬಂದಿದೆ. 

ಪ್ರಧಾನಿ ಹೆಲಿಕಾಪ್ಟರ್ ಬಳಿ ಬಲೂನ್ ಹಾರಿ ಬಂದಿರುವುದರಿಂದ ಸ್ವಲ್ಪ ಹೊತ್ತು ಆತಂಕದ ವಾತವಾರಣ ನಿರ್ಮಾಣವಾಗಿತ್ತು.

ಮೋದಿ ಕಾರ್ಯಕ್ರಮದ ಹೊರಭಾಗದಲ್ಲಿ ಹಾಗೂ ಮೋದಿ ಹೆಲಿಕಾಪ್ಟರ್ ಮೂಲಕ ತೆರಳು ಮಾರ್ಗದಲ್ಲಿ ಪ್ರತಿಭಟನೆ ವೇಳೆ ಬಲೂನ್ ಹಾರಿಬಿಟ್ಟ ಭದ್ರತಾ ಲೋಪವೆಸಗಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೋದಿ ಕಾರ್ಯಕ್ರಮದ ಹೊರಭಾಗದಲ್ಲಿ ಈ ಬಲೂನ್‌‌ಗಳನ್ನು ಹಾರಿ ಬಿಡಲಾಗಿದೆ. ಹಾರಿಬಿಟ್ಟ ದೊಡ್ಡ ಗಾತ್ರದ ಬಲೂನ್‌ಗಳು ಆಗಸದಲ್ಲಿ ತೇಲಾಡಿದೆ. ಇತ್ತ ಕಾರ್ಯಕ್ರಮದ ಮುಗಿಸಿ ಮೋದಿ ಹೆಲಿಕಾಪ್ಟರ್ ಏರಿ ಪ್ರಯಾಣ ಆರಂಭಿಸಿದರು. ಹೆಲಿಕಾಪ್ಟರ್ ಟೇಕ್ ಆಫ್ ಆಗಿ ಮೇಲಕ್ಕೆ ಹಾರುತ್ತಿದ್ದಂತೆ ಪ್ರತಿಭಟನಾಕಾರರ ಬಲೂನ್ ಅಡ್ಡಬಂದಿದೆ. ಆದರೆ ಪೈಲೈಟ್ ಸಮಯಪ್ರಜ್ಞೆಯಿಂದ ಬಹುದೊಡ್ಡ ಅಪಾಯ ತಪ್ಪಿದೆ.

ಇದು ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ನಡೆದ ಎರಡನೇ ಲೋಪವಾಗಿದೆ.

ಪಂಜಾಬ್ ಭೇಟಿಯಲ್ಲಿ ನಡೆದಿತ್ತು ಭದ್ರತಾ ಲೋಪ ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಈ ಹಿಂದೆ ನಡೆದಿತ್ತು. . ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು