10:49 PM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಕಾಶ್ಮೀರ ಭೇಟಿ ವೇಳೆ ಉಗ್ರರಿಂದ ಆತ್ಮಾಹುತಿ ದಾಳಿಗೆ ಸಂಚು..?: ಉಗ್ರರ ಹತ್ಯೆಯಿಂದ ಬಹಿರಂಗ

23/04/2022, 10:19

ಹೊಸದಿಲ್ಲಿ(reporterkarnataka.com): ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಹತರಾದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ಆತ್ಮಹತ್ಯಾ ದಾಳಿಗೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಇನ್ನೆರಡು ದಿನಗಳಿದ್ದು ಈ ವೇಳೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಕಾರ್ಯಾಚರಣೆ ಮುಕ್ತಾಯಗೊಳಿಸಿದ ಬಳಿಕ ಮಾತನಾಡಿರುವ ಪೊಲೀಸ್ ಅಧಿಕಾರಿ, ಜಮ್ಮುವಿನ ಹೊರವಲಯದಲ್ಲಿರುವ ಸುಂಜ್ವಾನ್‌ನಲ್ಲಿರುವ ಸೇನಾ ಶಿಬಿರದ ಬಳಿ ನಡೆದ ಎನ್‌ಕೌಂಟರ್‌ನಲ್ಲಿ ಸಿಐಎಸ್‌ಎಫ್‌ನ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಸಹ ಸಾವನ್ನಪ್ಪಿದ್ದರೆ, ಒಂಬತ್ತು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಿಂದ ನುಸುಳಿದ ನಂತರ ಇಬ್ಬರು ಭಯೋತ್ಪಾದಕರು ಗುರುವಾರ ಜಮ್ಮು ನಗರದ ಹೊರವಲಯವನ್ನು ಪ್ರವೇಶಿಸಿ ಸೇನಾ ಶಿಬಿರದ ಸಮೀಪವಿರುವ ಪ್ರದೇಶದಲ್ಲಿ ತಂಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಭಯೋತ್ಪಾದಕರು ಪ್ರಧಾನಿ ಭೇಟಿ ವೇಳೆ ವಿಧ್ವಂಸಕ ಕೃತ್ಯ ಎಸಗಲು ಯೋಜಿಸಿದ್ದರು, ಅಂತೆಯೇ ಆತ್ಮಹತ್ಯಾ ದಾಳಿಗೆ ಪೂರಕವಾಗುವ ಉಡುಪನ್ನು ಸೊಂಟಕ್ಕೆ ಧರಿಸಿದ್ದರು, ಭಯೋತ್ಪಾದಕರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು