11:36 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಕಾಶ್ಮೀರ ಭೇಟಿ ವೇಳೆ ಉಗ್ರರಿಂದ ಆತ್ಮಾಹುತಿ ದಾಳಿಗೆ ಸಂಚು..?: ಉಗ್ರರ ಹತ್ಯೆಯಿಂದ ಬಹಿರಂಗ

23/04/2022, 10:19

ಹೊಸದಿಲ್ಲಿ(reporterkarnataka.com): ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಹತರಾದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ಆತ್ಮಹತ್ಯಾ ದಾಳಿಗೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಇನ್ನೆರಡು ದಿನಗಳಿದ್ದು ಈ ವೇಳೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಕಾರ್ಯಾಚರಣೆ ಮುಕ್ತಾಯಗೊಳಿಸಿದ ಬಳಿಕ ಮಾತನಾಡಿರುವ ಪೊಲೀಸ್ ಅಧಿಕಾರಿ, ಜಮ್ಮುವಿನ ಹೊರವಲಯದಲ್ಲಿರುವ ಸುಂಜ್ವಾನ್‌ನಲ್ಲಿರುವ ಸೇನಾ ಶಿಬಿರದ ಬಳಿ ನಡೆದ ಎನ್‌ಕೌಂಟರ್‌ನಲ್ಲಿ ಸಿಐಎಸ್‌ಎಫ್‌ನ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಸಹ ಸಾವನ್ನಪ್ಪಿದ್ದರೆ, ಒಂಬತ್ತು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಿಂದ ನುಸುಳಿದ ನಂತರ ಇಬ್ಬರು ಭಯೋತ್ಪಾದಕರು ಗುರುವಾರ ಜಮ್ಮು ನಗರದ ಹೊರವಲಯವನ್ನು ಪ್ರವೇಶಿಸಿ ಸೇನಾ ಶಿಬಿರದ ಸಮೀಪವಿರುವ ಪ್ರದೇಶದಲ್ಲಿ ತಂಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಭಯೋತ್ಪಾದಕರು ಪ್ರಧಾನಿ ಭೇಟಿ ವೇಳೆ ವಿಧ್ವಂಸಕ ಕೃತ್ಯ ಎಸಗಲು ಯೋಜಿಸಿದ್ದರು, ಅಂತೆಯೇ ಆತ್ಮಹತ್ಯಾ ದಾಳಿಗೆ ಪೂರಕವಾಗುವ ಉಡುಪನ್ನು ಸೊಂಟಕ್ಕೆ ಧರಿಸಿದ್ದರು, ಭಯೋತ್ಪಾದಕರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು