3:06 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಕಾಶ್ಮೀರ ಭೇಟಿ ವೇಳೆ ಉಗ್ರರಿಂದ ಆತ್ಮಾಹುತಿ ದಾಳಿಗೆ ಸಂಚು..?: ಉಗ್ರರ ಹತ್ಯೆಯಿಂದ ಬಹಿರಂಗ

23/04/2022, 10:19

ಹೊಸದಿಲ್ಲಿ(reporterkarnataka.com): ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಹತರಾದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ಆತ್ಮಹತ್ಯಾ ದಾಳಿಗೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಇನ್ನೆರಡು ದಿನಗಳಿದ್ದು ಈ ವೇಳೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಕಾರ್ಯಾಚರಣೆ ಮುಕ್ತಾಯಗೊಳಿಸಿದ ಬಳಿಕ ಮಾತನಾಡಿರುವ ಪೊಲೀಸ್ ಅಧಿಕಾರಿ, ಜಮ್ಮುವಿನ ಹೊರವಲಯದಲ್ಲಿರುವ ಸುಂಜ್ವಾನ್‌ನಲ್ಲಿರುವ ಸೇನಾ ಶಿಬಿರದ ಬಳಿ ನಡೆದ ಎನ್‌ಕೌಂಟರ್‌ನಲ್ಲಿ ಸಿಐಎಸ್‌ಎಫ್‌ನ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಸಹ ಸಾವನ್ನಪ್ಪಿದ್ದರೆ, ಒಂಬತ್ತು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಿಂದ ನುಸುಳಿದ ನಂತರ ಇಬ್ಬರು ಭಯೋತ್ಪಾದಕರು ಗುರುವಾರ ಜಮ್ಮು ನಗರದ ಹೊರವಲಯವನ್ನು ಪ್ರವೇಶಿಸಿ ಸೇನಾ ಶಿಬಿರದ ಸಮೀಪವಿರುವ ಪ್ರದೇಶದಲ್ಲಿ ತಂಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಭಯೋತ್ಪಾದಕರು ಪ್ರಧಾನಿ ಭೇಟಿ ವೇಳೆ ವಿಧ್ವಂಸಕ ಕೃತ್ಯ ಎಸಗಲು ಯೋಜಿಸಿದ್ದರು, ಅಂತೆಯೇ ಆತ್ಮಹತ್ಯಾ ದಾಳಿಗೆ ಪೂರಕವಾಗುವ ಉಡುಪನ್ನು ಸೊಂಟಕ್ಕೆ ಧರಿಸಿದ್ದರು, ಭಯೋತ್ಪಾದಕರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು