10:54 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್ ಪಿಜಿ ತಂಡದಿಂದ ರಿಹರ್ಸಲ್, ಭದ್ರತಾ ಪರಿಶೀಲನೆ

13/04/2024, 23:25

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಶನಿವಾರ ರಾತ್ರಿ ರಿಹರ್ಸಲ್ ಮೂಲಕ ಎಸ್ ಪಿಜಿ ತಂಡ ಭದ್ರತಾ ಪರಿಶೀಲನೆ ನಡೆಸಿತು.





ಮಂಗಳೂರು ವಿಮಾನ ನಿಲ್ದಾಣದಿಂದಲೇ ಎಸ್ ಪಿಜಿ ತಂಡದ ಮುಖ್ಯಸ್ಥ ಹಾಗೂ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಭದ್ರತಾ ಸಿಬ್ಬಂದಿಗಳ ಜತೆ ಲೇಡಿಹಿಲ್ ನ ಶ್ರೀ ನಾರಾಯಣ ಗುರು ವೃತ್ತದವರೆಗೆ ರಿಹರ್ಸಲ್ ನಡೆಸಿ ಭದ್ರತಾ ಪರಿಶೀಲನೆ ನಡೆಸಿದರು. ನಂತರ ನಾರಾಯಣ ಗುರು ವೃತ್ತದಿಂದ ನವಭಾರತ್ ಸರ್ಕಲ್ ವರೆಗೆ ತೆರೆದ ಜೀಪಿನಲ್ಲಿ ಎಸ್ ಪಿಜಿ ತಂಡ ತೆರಳಿತು.
ನಗರದ ಆಯಕಟ್ಟಿನ ಪ್ರದೇಶವನ್ನು ಎಸ್ ಪಿಜಿ ತಂಡ ಈಗಾಗಲೇ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ಶನಿವಾರ ರಾತ್ರಿ ಎಸ್ ಪಿಜಿ ತಂಡವು ಪ್ರಧಾನಿ ಮೋದಿ ಅವರ ರೋಡ್ ಶೋ ಸಾಗಲಿರುವ ಎಂ.ಜಿ. ರೋಡ್ ಸೇರಿದಂತೆ ಆಯಕಟ್ಟಿನ ಎಲ್ಲ ಕಡೆಗಳಲ್ಲಿ ಅಂತಿಮ ಸಿದ್ದತೆಯ ಪರಿಶೀಲನೆ ನಡೆಸಿತು.ಎಸ್ ಪಿಜಿ ತಂಡ ಈಗಾಲೇ ಹಲವು ಸುತ್ತಿನ ಭದ್ರತಾ ಪರಿಶೀಲನೆ ನಡೆಸಿದೆ.
ನಗರದಲ್ಲಿ ಏ.29ರಂದು ಪ್ರಧಾನಿ ಮೋದಿ ಅವರ ರೋಡ್ ಶೋ ಆಯೋಜಿಸಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರ ಪ್ರಧಾನಿ ಪ್ರಚಾರ ನಡೆಸಲಿದ್ದಾರೆ.


ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಯಲಿರುವ ನಗರದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತದಿಂದ ನವಭಾರತ ಸರ್ಕಲ್ ವರೆಗೆ ರಸ್ತೆ ಮಧ್ಯದಲ್ಲಿ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಡಿವೈಡರ್ ಹಾರಿ ಯಾರೂ ರಸ್ತೆ ದಾಟದಂತೆ ಈ ವ್ಯವಸ್ಥೆ ಮಾಡಲಾಗಿದೆ. ಶ್ವಾನ ಹಾಗೂ ಬಾಂಬ್ ಸ್ಕ್ವಾಡ್ ನಿಂದ ಹಲವು ಸುತ್ತಿನ ಪರಿಶೀಲನೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು