12:51 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್ ಪಿಜಿ ತಂಡದಿಂದ ರಿಹರ್ಸಲ್, ಭದ್ರತಾ ಪರಿಶೀಲನೆ

13/04/2024, 23:25

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಶನಿವಾರ ರಾತ್ರಿ ರಿಹರ್ಸಲ್ ಮೂಲಕ ಎಸ್ ಪಿಜಿ ತಂಡ ಭದ್ರತಾ ಪರಿಶೀಲನೆ ನಡೆಸಿತು.





ಮಂಗಳೂರು ವಿಮಾನ ನಿಲ್ದಾಣದಿಂದಲೇ ಎಸ್ ಪಿಜಿ ತಂಡದ ಮುಖ್ಯಸ್ಥ ಹಾಗೂ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಭದ್ರತಾ ಸಿಬ್ಬಂದಿಗಳ ಜತೆ ಲೇಡಿಹಿಲ್ ನ ಶ್ರೀ ನಾರಾಯಣ ಗುರು ವೃತ್ತದವರೆಗೆ ರಿಹರ್ಸಲ್ ನಡೆಸಿ ಭದ್ರತಾ ಪರಿಶೀಲನೆ ನಡೆಸಿದರು. ನಂತರ ನಾರಾಯಣ ಗುರು ವೃತ್ತದಿಂದ ನವಭಾರತ್ ಸರ್ಕಲ್ ವರೆಗೆ ತೆರೆದ ಜೀಪಿನಲ್ಲಿ ಎಸ್ ಪಿಜಿ ತಂಡ ತೆರಳಿತು.
ನಗರದ ಆಯಕಟ್ಟಿನ ಪ್ರದೇಶವನ್ನು ಎಸ್ ಪಿಜಿ ತಂಡ ಈಗಾಗಲೇ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ಶನಿವಾರ ರಾತ್ರಿ ಎಸ್ ಪಿಜಿ ತಂಡವು ಪ್ರಧಾನಿ ಮೋದಿ ಅವರ ರೋಡ್ ಶೋ ಸಾಗಲಿರುವ ಎಂ.ಜಿ. ರೋಡ್ ಸೇರಿದಂತೆ ಆಯಕಟ್ಟಿನ ಎಲ್ಲ ಕಡೆಗಳಲ್ಲಿ ಅಂತಿಮ ಸಿದ್ದತೆಯ ಪರಿಶೀಲನೆ ನಡೆಸಿತು.ಎಸ್ ಪಿಜಿ ತಂಡ ಈಗಾಲೇ ಹಲವು ಸುತ್ತಿನ ಭದ್ರತಾ ಪರಿಶೀಲನೆ ನಡೆಸಿದೆ.
ನಗರದಲ್ಲಿ ಏ.29ರಂದು ಪ್ರಧಾನಿ ಮೋದಿ ಅವರ ರೋಡ್ ಶೋ ಆಯೋಜಿಸಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರ ಪ್ರಧಾನಿ ಪ್ರಚಾರ ನಡೆಸಲಿದ್ದಾರೆ.


ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಯಲಿರುವ ನಗರದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತದಿಂದ ನವಭಾರತ ಸರ್ಕಲ್ ವರೆಗೆ ರಸ್ತೆ ಮಧ್ಯದಲ್ಲಿ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಡಿವೈಡರ್ ಹಾರಿ ಯಾರೂ ರಸ್ತೆ ದಾಟದಂತೆ ಈ ವ್ಯವಸ್ಥೆ ಮಾಡಲಾಗಿದೆ. ಶ್ವಾನ ಹಾಗೂ ಬಾಂಬ್ ಸ್ಕ್ವಾಡ್ ನಿಂದ ಹಲವು ಸುತ್ತಿನ ಪರಿಶೀಲನೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು