3:03 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಹುಟ್ಟುಹಬ್ಬ: ಮಾಲೂರಿನಲ್ಲಿ ಬೃಹತ್‌ ರಕ್ತದಾನ ಶಿಬಿರ: 1039 ಯೂನಿಟ್‌ ರಕ್ತ ಸಂಗ್ರಹಣೆಯ ಮೂಲಕ ದಾಖಲೆ

19/09/2021, 09:17

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ ಕುಮಾರ್‌ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್‌ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾಗಿದೆ. ರಾಜ್ಯದಲ್ಲಿ ನಡೆದ ಎಲ್ಲ ಕಾರ್ಯಕ್ರಮಗಳಲ್ಲೂ ಅತಿ ಹೆಚ್ಚು 1039 ಯುನಿಟ್‌ ರಕ್ತವನ್ನು ಸಂಗ್ರಹಿಸಿದ ಹೆಗ್ಗಳಿಕೆ ಈ ಕಾರ್ಯಕ್ರಮದ್ದಾಗಿದೆ. 

ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದು ಸಾವಿರ ಯೂನಿಟ್‌ ರಕ್ತವನ್ನು ಸಂಗ್ರಹಿಸಿ ದೇಶದಲ್ಲಿನ ರಕ್ತಹೀನ ರೋಗಿಗಳ ಪಾಲಿನ ಸಂಜೀವಿನ ಆಗುವ ನಿಟ್ಟಿನಲ್ಲಿ ತಾಲ್ಲೂಕು ಬಿಜೆಪಿ ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ ನಿಗದಿಪಡಿಸಿದ್ದ ಗುರಿಯನ್ನು ಸಾಧಿಸಿದ್ದೇವೆ. ತಾಲ್ಲೂಕಿನ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ ಕಾರಣ ನಿಗದಿತ ಗುರಿಯನ್ನು ಸಾಧಿಸಿದ್ದೇವೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಢುವ ಮೂಲಕ ಮೋದಿ ಅವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ ಕುಮಾರ್‌ ತಿಳಿಸಿದರು. 

ನಿನ್ನೆ ಬೃಹತ್‌ ರಕ್ತಧಾನ ಶಿಬಿರವನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಉಚಿತವಾಗಿ ಹೆಲ್ಮೇಟ್‌ ವಿತರಣೆ ಹೀಗೆ ಹತ್ತು ಹಲವು ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು. 

ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರಿಗೆ ಇದೇ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು