2:27 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಹುಟ್ಟುಹಬ್ಬ: ಮಾಲೂರಿನಲ್ಲಿ ಬೃಹತ್‌ ರಕ್ತದಾನ ಶಿಬಿರ: 1039 ಯೂನಿಟ್‌ ರಕ್ತ ಸಂಗ್ರಹಣೆಯ ಮೂಲಕ ದಾಖಲೆ

19/09/2021, 09:17

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ ಕುಮಾರ್‌ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್‌ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾಗಿದೆ. ರಾಜ್ಯದಲ್ಲಿ ನಡೆದ ಎಲ್ಲ ಕಾರ್ಯಕ್ರಮಗಳಲ್ಲೂ ಅತಿ ಹೆಚ್ಚು 1039 ಯುನಿಟ್‌ ರಕ್ತವನ್ನು ಸಂಗ್ರಹಿಸಿದ ಹೆಗ್ಗಳಿಕೆ ಈ ಕಾರ್ಯಕ್ರಮದ್ದಾಗಿದೆ. 

ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದು ಸಾವಿರ ಯೂನಿಟ್‌ ರಕ್ತವನ್ನು ಸಂಗ್ರಹಿಸಿ ದೇಶದಲ್ಲಿನ ರಕ್ತಹೀನ ರೋಗಿಗಳ ಪಾಲಿನ ಸಂಜೀವಿನ ಆಗುವ ನಿಟ್ಟಿನಲ್ಲಿ ತಾಲ್ಲೂಕು ಬಿಜೆಪಿ ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ ನಿಗದಿಪಡಿಸಿದ್ದ ಗುರಿಯನ್ನು ಸಾಧಿಸಿದ್ದೇವೆ. ತಾಲ್ಲೂಕಿನ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ ಕಾರಣ ನಿಗದಿತ ಗುರಿಯನ್ನು ಸಾಧಿಸಿದ್ದೇವೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಢುವ ಮೂಲಕ ಮೋದಿ ಅವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ ಕುಮಾರ್‌ ತಿಳಿಸಿದರು. 

ನಿನ್ನೆ ಬೃಹತ್‌ ರಕ್ತಧಾನ ಶಿಬಿರವನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಉಚಿತವಾಗಿ ಹೆಲ್ಮೇಟ್‌ ವಿತರಣೆ ಹೀಗೆ ಹತ್ತು ಹಲವು ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು. 

ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರಿಗೆ ಇದೇ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು