4:56 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಹುಟ್ಟುಹಬ್ಬ: ಮಾಲೂರಿನಲ್ಲಿ ಬೃಹತ್‌ ರಕ್ತದಾನ ಶಿಬಿರ: 1039 ಯೂನಿಟ್‌ ರಕ್ತ ಸಂಗ್ರಹಣೆಯ ಮೂಲಕ ದಾಖಲೆ

19/09/2021, 09:17

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ ಕುಮಾರ್‌ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್‌ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾಗಿದೆ. ರಾಜ್ಯದಲ್ಲಿ ನಡೆದ ಎಲ್ಲ ಕಾರ್ಯಕ್ರಮಗಳಲ್ಲೂ ಅತಿ ಹೆಚ್ಚು 1039 ಯುನಿಟ್‌ ರಕ್ತವನ್ನು ಸಂಗ್ರಹಿಸಿದ ಹೆಗ್ಗಳಿಕೆ ಈ ಕಾರ್ಯಕ್ರಮದ್ದಾಗಿದೆ. 

ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದು ಸಾವಿರ ಯೂನಿಟ್‌ ರಕ್ತವನ್ನು ಸಂಗ್ರಹಿಸಿ ದೇಶದಲ್ಲಿನ ರಕ್ತಹೀನ ರೋಗಿಗಳ ಪಾಲಿನ ಸಂಜೀವಿನ ಆಗುವ ನಿಟ್ಟಿನಲ್ಲಿ ತಾಲ್ಲೂಕು ಬಿಜೆಪಿ ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ ನಿಗದಿಪಡಿಸಿದ್ದ ಗುರಿಯನ್ನು ಸಾಧಿಸಿದ್ದೇವೆ. ತಾಲ್ಲೂಕಿನ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ ಕಾರಣ ನಿಗದಿತ ಗುರಿಯನ್ನು ಸಾಧಿಸಿದ್ದೇವೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಢುವ ಮೂಲಕ ಮೋದಿ ಅವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ ಕುಮಾರ್‌ ತಿಳಿಸಿದರು. 

ನಿನ್ನೆ ಬೃಹತ್‌ ರಕ್ತಧಾನ ಶಿಬಿರವನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಉಚಿತವಾಗಿ ಹೆಲ್ಮೇಟ್‌ ವಿತರಣೆ ಹೀಗೆ ಹತ್ತು ಹಲವು ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು. 

ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರಿಗೆ ಇದೇ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು