4:31 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸ್ವಾಗತಕ್ಕೆ ಸಕಲ ಸಿದ್ಧತೆ: 9 ಜಂಕ್ಷನ್‌ಗಳಲ್ಲಿ‌ ಸಂಚಾರ ಮಾರ್ಗ ಬದಲಾವಣೆ; 15 ಕಡೆ ಪಾರ್ಕಿಂಗ್ ವ್ಯವಸ್ಥೆ

31/08/2022, 13:01

ಮಂಗಳೂರು(reporterkarnataka.com): ಸೆ.2ರಂದು ಪ್ರಧಾನಿ ಮೋದಿ ಭಾಗವಹಿಸುವ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಕಾರ್ಯಕ್ರಮದ ಯಶಸ್ಸಿಗೆ ದ.ಕ.ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.  ಕೆಲವು ಫಲಾನಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.

ಫಲಾನುಭವಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ನಿರ್ದೇಶನ ನೀಡಿಲ್ಲ. ಆದರೆ ಮನವಿ ಮಾಡಲಾಗಿದೆ. ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಯಾವುದೇ ಆಕ್ಷೇಪಾರ್ಹ ವಸ್ತುಗಳನ್ನು ತರುವಂತಿಲ್ಲ. ಕಮಿಷನರೆಟ್ ವ್ಯಾಪ್ತಿಯ 9 ಜಂಕ್ಷನ್‌ಗಳಲ್ಲಿ‌ ಸಂಚಾರ ಮಾರ್ಗ ಬದಲಿಸಲಾಗುತ್ತದೆ. 15 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಸಿಎಆರ್, ಕೆಎಸ್ಸಾರ್ಪಿ, ಹೋಮ್‌ಗಾರ್ಡ್ ಸಹಿತ ವಿವಿಧ ಘಟಕಗಳ ಅಧಿಕಾರಿ, ಸಿಬ್ಬಂದಿಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗುತ್ತದೆ ಎಂದು ಹೇಳಿದರು.


ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕಾರ್ಯಕ್ರಮದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಬಗ್ಗೆ 2 ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು