4:25 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ:  ಕೆಂಪುಕೋಟೆಯಲ್ಲಿ ಪೊಲೀಸ್ ಭದ್ರತೆ ಹೇಗಿದೆ..?

14/08/2022, 12:39

ಹೊಸದಿಲ್ಲಿ(reporterkarnataka.com)
ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕೆಂಪುಕೋಟೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.

ಈ ಸಮಾರಂಭದಲ್ಲಿ 7000 ಮಂದಿ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ, 10 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಹುಹಂತಗಳ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಈ ಬಾರಿ ಮುಖ ಗುರುತಿಸುವ ವ್ಯವಸ್ಥೆ (ಎಫ್‌ಆರ್‌ಎಸ್) ಕ್ಯಾಮರಾಗಳನ್ನು ಕೂಡಾ ಕೆಂಪುಕೋಟೆ ಪ್ರವೇಶಿಸುವ ದ್ವಾರದ ಬಳಿ ಸ್ಥಾಪಿಸಲಾಗಿದೆ. ಪ್ರದೇಶದಲ್ಲಿ ರಾಡಾರ್‌ಗಳನ್ನು ನಿಯೋಜಿಸಲಾಗಿದೆ ಎಂದು ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್ ತಿಳಿಸಿದ್ದಾರೆ. 

ನಾವು ಅತ್ಯಂತ ನಿಖರತೆಯ ಭದ್ರತಾ ಕ್ಯಾಮರಾಗಳನ್ನು ಕೆಂಪುಕೋಟೆಯ ಸುತ್ತ ಸ್ಥಾಪಿಸಿದ್ದೇವೆ. ಇದರ ದಿನದ 24 ಗಂಟೆಗಳ ಕಾಲವೂ ನಿಗಾ ಇಟ್ಟಿದ್ದೇವೆ. ಈ ಬಾರಿ ಅತಿಥಿಗಳ ಸಂಖ್ಯೆ 7000 ಕ್ಕೇರಿದೆ. ಪ್ರವೇಶ ದ್ವಾರದಲ್ಲಿ ಎಫ್‌ಆರ್‌ಎಸ್ ಕ್ಯಾಮರಾಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

*ಏನೆಲ್ಲ ನಿಷೇಧ..?

ಬುತ್ತಿ, ನೀರಿನ ಬಾಟಲಿ, ರಿಮೋಟ್ ಕಂಟ್ರೋಲ್ ಕಾರ್ ಕೀ, ಸಿಗರೇಟ್ ಲೈಟರ್, ಬ್ರೀಫ್‌ಕೇಸು, ಕೈ ಚೀಲ, ಕ್ಯಾಮರಾ, ಬೈನಾಕ್ಯುಲರ್, ಕೊಡೆಗಳು ಮತ್ತು ಇತರ ವಸ್ತುಗಳನ್ನು ಕೆಂಪುಕೋಟೆಯ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ . ಗಾಳಿಪಟ. ಬಲೂನ್, ಚೀನಾ ಲಾಂದ್ರಗಳನ್ನು ಆ.13ರಿಂದ 15ರಂದು ಕಾರ್ಯಕ್ರಮ ಮುಗಿಯುವವರೆಗೆ ಹಾರಿಸುವಂತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು