4:08 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ:  ಕೆಂಪುಕೋಟೆಯಲ್ಲಿ ಪೊಲೀಸ್ ಭದ್ರತೆ ಹೇಗಿದೆ..?

14/08/2022, 12:39

ಹೊಸದಿಲ್ಲಿ(reporterkarnataka.com)
ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕೆಂಪುಕೋಟೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.

ಈ ಸಮಾರಂಭದಲ್ಲಿ 7000 ಮಂದಿ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ, 10 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಹುಹಂತಗಳ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಈ ಬಾರಿ ಮುಖ ಗುರುತಿಸುವ ವ್ಯವಸ್ಥೆ (ಎಫ್‌ಆರ್‌ಎಸ್) ಕ್ಯಾಮರಾಗಳನ್ನು ಕೂಡಾ ಕೆಂಪುಕೋಟೆ ಪ್ರವೇಶಿಸುವ ದ್ವಾರದ ಬಳಿ ಸ್ಥಾಪಿಸಲಾಗಿದೆ. ಪ್ರದೇಶದಲ್ಲಿ ರಾಡಾರ್‌ಗಳನ್ನು ನಿಯೋಜಿಸಲಾಗಿದೆ ಎಂದು ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್ ತಿಳಿಸಿದ್ದಾರೆ. 

ನಾವು ಅತ್ಯಂತ ನಿಖರತೆಯ ಭದ್ರತಾ ಕ್ಯಾಮರಾಗಳನ್ನು ಕೆಂಪುಕೋಟೆಯ ಸುತ್ತ ಸ್ಥಾಪಿಸಿದ್ದೇವೆ. ಇದರ ದಿನದ 24 ಗಂಟೆಗಳ ಕಾಲವೂ ನಿಗಾ ಇಟ್ಟಿದ್ದೇವೆ. ಈ ಬಾರಿ ಅತಿಥಿಗಳ ಸಂಖ್ಯೆ 7000 ಕ್ಕೇರಿದೆ. ಪ್ರವೇಶ ದ್ವಾರದಲ್ಲಿ ಎಫ್‌ಆರ್‌ಎಸ್ ಕ್ಯಾಮರಾಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

*ಏನೆಲ್ಲ ನಿಷೇಧ..?

ಬುತ್ತಿ, ನೀರಿನ ಬಾಟಲಿ, ರಿಮೋಟ್ ಕಂಟ್ರೋಲ್ ಕಾರ್ ಕೀ, ಸಿಗರೇಟ್ ಲೈಟರ್, ಬ್ರೀಫ್‌ಕೇಸು, ಕೈ ಚೀಲ, ಕ್ಯಾಮರಾ, ಬೈನಾಕ್ಯುಲರ್, ಕೊಡೆಗಳು ಮತ್ತು ಇತರ ವಸ್ತುಗಳನ್ನು ಕೆಂಪುಕೋಟೆಯ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ . ಗಾಳಿಪಟ. ಬಲೂನ್, ಚೀನಾ ಲಾಂದ್ರಗಳನ್ನು ಆ.13ರಿಂದ 15ರಂದು ಕಾರ್ಯಕ್ರಮ ಮುಗಿಯುವವರೆಗೆ ಹಾರಿಸುವಂತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು