10:12 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಏ.14ರಂದು ಮಂಗಳೂರಿಗೆ: ಗೋಲ್ಡ್‌ಫಿಂಚ್ ಮೈದಾನದಲ್ಲಿ ಬಿಜೆಪಿ ಬೃಹತ್ ರ್‍ಯಾಲಿ

08/04/2024, 20:49

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಚುನಾವಣಾ ಸಮಿತಿಯ ಪ್ರಧಾನ ಸಂಚಾಲಕರ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಸಂಜೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ದ.ಕ. ಜಿಲ್ಲೆಗೆ ಹಿಂದಿನ ಬಾರಿ ಮೋದಿ ಅವರು ಭೇಟಿ ನೀಡಿದಾಗ ಸೇರಿದ ಜನತೆಯ ದಾಖಲೆ ಮೀರಿಸುವಂತೆ ಈ ಬಾರಿ ಜನರು ಸಮಾವೇಶಗೊಳ್ಳಲಿದ್ದಾರೆ. ಪ್ರಧಾನಿ ಭೇಟಿಯಿಂದ ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಲಿದೆ. ಅನಂತರ ಮೂರು ದಿನಗಳ ಕಾಲ ಅಂದರೆ ಏ.15,16, 17ರಂದು ಪಕ್ಷದ ರಾಜ್ಯಾಧ್ಯಕ್ಷರಿಂದ ತೊಡಗಿ ಎಲ್ಲ ಪ್ರಮುಖರು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಸಂಪರ್ಕ ಹಾಗೂ ಪ್ರಚಾರ ನಡೆಸಲಿದ್ದಾರೆ ಎಂದು ಸುನಿಲ್ ಕುಮಾರ್ ಹೇಳಿದರು.
ಏ.10, 11ರಂದು ಪಕ್ಷವು ಬೂತ್ ಮಟ್ಟದ ಮಹಾ ಪ್ರಚಾರ ಅಭಿಯಾನ ಕೈಗೊಳ್ಳಲಿದ್ದು,, ರಾಜ್ಯದ 58 ಸಾವಿರ ಬೂತ್‌ಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ 15, 16, 17ರಂದು ಮನೆ ಮನೆ ಸಂಪರ್ಕ ಅಭಿಯಾನ ನಡೆಯುತ್ತದೆ. ಈ ಬಾರಿ ಸುರಕ್ಷಿತ ಭಾರತ, ಸಾಂಸ್ಕೃತಿಕ ಭಾರತ ಮತತ್ತು ವಿಕಸಿತ ಭಾರತ ಎಂಬ ಮೂರು ಪ್ರಮುಖ ವಿಚಾರಗಳನ್ನು ಇಟ್ಟುಕೊಂಡು ಜನರ ಬಳಿಗೆ ಹೋಗುತ್ತೇವೆ ಎಂದು ಸುನಿಲ್ ಕುಮಾರ್ ವಿವರಿಸಿದರು.
ಶೌಚಾಲಯ ನಿರ್ಮಾಣದಿಂದ ತೊಡಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವರೆಗೆ, ಮನೆ ಮನೆಗೆ ಎಲ್‌ಪಿಜಿ ಸಂಪರ್ಕದಿಂದ ಹಿಡಿದು ಚಂದ್ರಯಾನದ ತನಕ ಪ್ರಧಾನಿ ಮೋದಿ ಅವರ ಸರಕಾರ ಕೈಗೊಂಡ ಎಲ್ಲ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಮನೆ ಮನೆಗೆ ತಲುಪಿಸುತ್ತೇವೆ. ಎಲ್ಲ ಹಂತಗಳಲ್ಲಿ ಮತದಾರಿಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತೇವೆ ಎಂದು ಸುನಿಲ್‌ ಕುಮಾರ್ ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯಕ್ಕೆ ಆಗಮಿಸಿ ಮೊದಲ ಹಂತದ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಇದೀಗ ಪ್ರಧಾನಿ ಮೋದಿ ಅವರ ಪ್ರವಾಸದ ಮೂಲಕ ಎರಡನೇ ಹಂತದ ಪ್ರಚಾರ ಅಭಿಯಾನ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ಏ.14ರಂದು ಮಂಗಳೂರಿನ ಸಮಾವೇಶ ಮುಗಿದ ಬಳಿಕ ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಅವರು ಬೆಂಗಳೂರಿನಲ್ಲಿ ಬೃಹತ್ ರೋಡ್‌ಶೋ ನಡೆಸಲಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರು ಅಸಹಕಾರ ತೋರುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಸವಾಲು ಎದುರಾಗಿಲ್ಲವೇ ಎಂಬ ಪರ್ತಕರ್ತರ ಪ್ರಶ್ನೆಗೆ, ಹಾಗೇನೂ ಇಲ್ಲ, ಎಲ್ಲರನ್ನೂ ಒಗ್ಗೂಡಿಸಿಕೊಂಡು ಚುನಾವಣೆಗೆ ಹೋಗುತ್ತೇವೆ. ಕಾಗೇರಿಯವರ ನಾಮಪತ್ರ ಸಲ್ಲಿಕೆ ಸಂದರ್ಭ ನಾನೂ ಹಾಜರಿದ್ದೆ ಎಂದು ಸುನಿಲ್ ಹೇಳಿದರು.
*ವಿಧ್ವಂಸಕ ಶಕ್ತಿಗಳಿಗೆ ಕಾಂಗ್ರೆಸ್ ಕುಮ್ಮಕ್ಕು:*
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ನಕ್ಸಲರು ಹಾಗೂ ಇತರ ವಿಧ್ವಂಸಕ ಶಕ್ತಿಗಳಿಗೆ ಹೆಚ್ಚಿನ ಹುಮ್ಮಸ್ಸು ಬಂದಿದೆ. ಕಾಂಗ್ರೆಸ್‌ ಸರಕಾರದ ಧೋರಣೆಯೂ ಈ ಶಕ್ತಿಗಳನ್ನು ಪೋಷಿಸುವಂತೆಯೇ ಇದ್ದು,, ಅವುಗಳನ್ನು ಮಟ್ಟಹಾಕುವ ದಿಟ್ಟತನವನ್ನು ಸಿದ್ದರಾಮಯ್ಯ ಸರಕಾರ ತೋರಬೇಕು. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಕಲವು ಭಾಗಗಳಲ್ಲಿ ನಕ್ಸಲರು ಮತ್ತೆ ಚಿಗುರಿಕೊಂಡಿದ್ದಾರೆ. ಕೆಲವು ಹಳ್ಳಿಗಳಿಗೆ, ಮನೆಗಳಿಗೆ ಭೇಟಿ ನೀಡಿ ಸುಲಿಗೆ ಮಾಡುತ್ತಿದ್ದಾರೆ. ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಸರಕಾರ ಇದನ್ನು ಅರ್ಥ ಮಾಡಿಕೊಂಡು ಸಮಾಜ ದ್ರೋಹಿಗಳನ್ನು ಸದೆಬಡಿಯಬೇಕು ಎಂದು ಸುನಿಲ್ ಕುಮಾರ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಮತ್ತು ಯತೀಶ್ ಆರುವಾರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು