5:53 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ರೋಡ್‌ ಶೋ: 14ರಂದು ಸಂಜೆ 5 ಗಂಟೆಗೆ ನಾರಾಯಣ ಗುರು ವೃತ್ತದಿಂದ ಆರಂಭ; ಸಾರ್ವಜನಿಕ ಸಮಾವೇಶ ಇಲ್ಲ

10/04/2024, 20:45

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಮಾವೇಶದ ಬದಲು ಸಂಜೆ 5 ಗಂಟೆಗೆ ಬೃಹತ್ ರೋಡ್‌ಶೋ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಏ. 14ಕ್ಕೆ ಸಂಜೆ 5 ಗಂಟೆಗೆ ನಾರಾಯಣ ಗುರು ವೃತ್ತದಿಂದ ಆರಂಭಿಸಿ ಪಿವಿಎಸ್‌ ವೃತ್ತದ ಮೂಲಕ ಹಂಪನಕಟ್ಟೆ ಸಿಗ್ನಲ್‌ ತನಕ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ರೋಡ್‌ ಶೋ ನಡೆಸುವುದೆಂದು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅಗತ್ಯ ಅನುಮತಿಗಳನ್ನು ಪಡೆಯಲಾಗಿದ್ದು, ಭದ್ರತೆಗಾಗಿ ಪೊಲೀಸ್ ಇಲಾಖೆಯ ಜತೆಗೆ ಸಂವಹನ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಬೇರೆ ಬೇರೆ ಭಾಗಗಳಿಂದ ಕಾರ್ಯಕರ್ತರು, ಬೆಂಬಲಿಗರು ಬಹು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮೂಡುಬಿದಿರೆ, ಮಂಗಳೂರು ವಿಧಾನಸಭಾ ಕ್ಷೇತ್ರಗಳಿಂದ ಹೆಚ್ಚು ಕಾರ್ಯಕರ್ತರನ್ನು ಸೇರಿಸುವ ಯೋಜನೆ ಮಾಡಲಾಗಿದೆ. ಬೂತ್ ಮಟ್ಟದ ಪಕ್ಷದ ಕಾರ್ಯಗಳು ಪ್ರಗತಿಯಲ್ಲಿರುವ ಕಾರಣ ಉಳಿದ ನಾಲ್ಕು ಕ್ಷೇತ್ರಗಳಿಗೆ ಈ ವಿಷಯದಲ್ಲಿ ಹೆಚ್ಚಿನ ಗುರಿ ನಿಗದಿ ಮಾಡಿಲ್ಲ. ಈ ಭಾಗಗಳಿಂದಲೂ ಬಿಜೆಪಿ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಲಾಗುವುದು ಎಂದು ಜಿಲ್ಲಾ ಅಧ್ಯಕ್ಷರು ತಿಳಿಸಿದರು.

ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಜಿಲ್ಲೆಯ ಎಲ್ಲಾ ಮುಖಂಡರು, ರಾಜ್ಯ ನಾಯಕರು, ಪದಾಧಿಕಾರಿಗಳು, ಹಿತೈಷಿಗಳು ಭಾಗವಹಿಸುತ್ತಾರೆ. ಪಕ್ಷದ ರಾಜ್ಯ ಚುನಾವಣಾ ಸಂಚಾಲಕರಾದ ಜಗದೀಶ್ ಹಿರೇಮನಿಯವರು ಈಗಾಗಲೇ ನಮ್ಮ ಜತೆಗಿದ್ದಾರೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ಹಂಚುವ ಮೂಲಕ ಮೋದಿ ಅವರಿಗೆ ಹೃತ್ಪೂರ್ವಕ ಸ್ವಾಗತ ಕೋರಲು ಸಿದ್ಧತೆ ನಡೆದಿದೆ. ಒಟ್ಟು 2ರಿಂದ 2.5 ಕಿ.ಮೀ ಉದ್ದಕ್ಕೆ ರೋಡ್‌ ಶೋ ನಡೆಯಲಿದೆ ಎಂದು ಸತೀಶ್ ಕುಂಪಲ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಸಂಚಾಲಕ ಜಗದೀಶ್ ಹಿರೇಮನಿ, ಜಿಲ್ಲಾ ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ, ಬಂಟ್ವಾಳ ಕ್ಷೇತ್ರದ ಚುನಾವಣಾ ಉಸ್ತುವಾರಿ ಜಗದೀಶ್ ಶೇಣವ, ಮಾಜಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದ್ರೆ, ಹಾಗೂ ಕಸ್ತೂರಿ ಪಂಜ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು