11:54 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪ್ರಧಾನಿಯ ಸ್ಚಚ್ಫತಾ ಆಂದೋಲನಕ್ಕೆ ಕ್ಯಾರೇ ಎನ್ನದ ರೈಲ್ವೆ ಇಲಾಖೆ: ಫರಂಗಿಪೇಟೆಯಲ್ಲಿ ರಾಶಿ ರಾಶಿ ತ್ಯಾಜ್ಯಗಳ ವಿಶ್ವರೂಪ ದರ್ಶನ

10/06/2024, 11:00

ಯಾದವ ಕುಲಾಲ್ ಅಗ್ರಬೈಲು ಬಿ.ಸಿ.ರೋಡ್

info.reporterkarnataka@gmail.com

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಬಳಿ ಸಿಗುವ ಪುದು ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯಗಳದ್ದೇ ಕಾರುಬಾರು.
ಹೆದ್ದಾರಿಯ ರಸ್ತೆ ಎಲ್ಲಾ ಕಡೆ, ಫರಂಗಿಪೇಟೆ ಹೃದಯ ಭಾಗದಲ್ಲಿರುವ ರೈಲ್ವೇ ಇಲಾಖೆಗೆ ಸೇರಿದ ಸ್ಥಳ, ಫರಂಗಿಪೇಟೆ-ಕುಂಪನಮಜಲು ರಸ್ತೆಗೆ ಹೋಗುವ ರೈಲ್ವೇ ಕ್ರಾಸಿಂಗ್ ನಂತರ ಸಿಗುವ ಸೇತುವೆ ಬುಡದಲ್ಲಿ ತ್ಯಾಜ್ಯಗಳು ತುಂಬಿ ತುಳುಕುತ್ತಿದೆ.


ಫರಂಗಿಪೇಟೆಯ ಒಂದು ಬದಿಯಲ್ಲೇ ರೈಲ್ವೇ ಇಲಾಖೆಗೆ ಸೇರಿದ ಸ್ಥಳವೇ ಹೆಚ್ಚಿನ ಫ್ಲಾಟ್‌ಗಳ ಮನೆಯ ವಾರಸುದಾರರಿಗೆ ಕಸ ಹಾಕುವ ಕೇಂದ್ರ ಸ್ಥಳವಾಗಿ ಪರಿಣಮಿಸಿದೆ. ರೈಲ್ವೇ ಜಾಗದಲ್ಲಿ ಒಂದು ಕಡೆ ಕಟ್ಟಡ ಕಾಮಗಾರಿ ಕೆಲಸ ನಡೆಯುತ್ತಿದ್ದು, ವರದೇಶ್ವರ ದೇವಸ್ಥಾನದ ಬಳಿ ಹೆದ್ದಾರಿಗೆ ಸೇರುವ ರಸ್ತೆಯ ಬದಿಯಲ್ಲಿ ತ್ಯಾಜ್ಯಗಳು ರಾಶಿ ಬಿದ್ದಿವೆ. ರೈಲ್ವೇ ಇಲಾಖೆಯ ಅಧೀನದಲ್ಲಿರುವ ಸ್ಥಳವನ್ನು ಭದ್ರತೆ ಮಾಡಿ ಕಾಪಾಡುವುದು ರೈಲ್ವೇ ಇಲಾಖೆಯದ್ದಾಗಿದ್ದು, ಮೀನು ಮಾರ್ಕೆಟ್ ಎತ್ತಂಗಡಿ ಮಾಡುವಾಗ ರೈಲ್ವೇ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿ ನಂತರ ಅದನ್ನು ಸುಭದ್ರವಾಗಿಡುವ ಗೋಜಿಗೇ ಹೋಗಲಿಲ್ಲ. ಸಿಸಿ ಕ್ಯಾಮರವನ್ನಾದರೂ ಈ ಪ್ರದೇಶದಲ್ಲಿ ಅಳವಡಿಸಿರುತ್ತಿದ್ದರೆ ತ್ಯಾಜ್ಯ ಎಸೆಯುವವರು ಆ ಕಡೆ ತಲೆ ಹಾಕುತ್ತಿರಲಿಲ್ಲ.
*ಸೇತುವೆಯಡಿ ರಾಶಿ ತ್ಯಾಜ್ಯ:* ಫರಂಗಿಪೇಟೆ ರೈಲ್ವೇ ಕ್ರಾಸಿಂಗ್ ನಂತರ ಸಿಗುವ ಸೇತುವೆಯಡಿ ರಾಶಿ ತ್ಯಾಜ್ಯಗಳಿದ್ದು ಇನ್ನೇನು ಮಳೆ ನೀರಿಗೆ ನದಿ ಸೇರಲು ಸಿದ್ಧವಾಗಿದೆ. ಈ ರಸ್ತೆಯುದ್ದಕ್ಕೂ ಫ್ಲಾಟುಗಳು ಸಾಲು ಸಾಲಾಗಿದ್ದು ಕಸ ಉತ್ಪತ್ತಿಗೆ ಕಡಿವಾಣವೇ ಇಲ್ಲದಂತಾಗಿದೆ.
ಈಗಿನ ಕಾಲದಲ್ಲಿ ತ್ಯಾಜ್ಯ ಉತ್ಪತ್ತಿಯಾಗದ ಮನೆಗಳಿರುವುದಂಟೇ. ಮಾರ್ಕೆಟ್‌ಗೆ ಹೋಗಿ ಸಾಮಾನು ಖರೀದಿಸಿದರೆ ಎಲ್ಲಾ ಪ್ಲಾಸ್ಟಿಕ್ ಪ್ಯಾಕೇಟ್‌ಗಳು. ಇನ್ನು ತರಕಾರಿ, ಮೀನು ತ್ಯಾಜ್ಯ ಹೀಗೆ ದಿನಂಪ್ರತಿ ಅಡುಗೆ ಮಾಡುವ ಮನೆಯಲ್ಲಿ ತ್ಯಾಜ್ಯ ಉತ್ಪತ್ತಿಯಾಗುವುದು ಸಹಜ. ಆದರೆ ತಮ್ಮ ಮನೆಯಲ್ಲಿ ಉತ್ಪತಿಯಾಗುವ ತ್ಯಾಜ್ಯವನ್ನು ಎಲ್ಲೋ ಒಂದು ಕಡೆ ಎಸೆದು ಬಂದು ಪರಿಸರಕ್ಕೆ ಹಾನಿ ಮಾಡುವ ಬದಲು ಪಂಚಾಯತ್ ವತಿಯಿಂದ ಕಸ ಸಂಗ್ರಹಣ ಮಾಡಲ್ಪಡುವ ವ್ಯವಸ್ಥೆಗೆ ಸಹಕಾರ ನೀಡಿದರೆ ಎಲ್ಲರ ಆರೋಗ್ಯಕ್ಕೆ ಒಳ್ಳೆಯದು.
ಪ್ರತೀ ಮನೆ ಮನೆಗೆ ಪ್ರತೀ ವಾರದಲ್ಲಿ ಕಸಗಳನ್ನು ತೆಗೆದುಕೊಳ್ಳಲು ಪಂಚಾಯತ್ ವತಿಯಿಂದ ಗುತ್ತಿಗೆದಾರರ ಮುಖಾಂತರ ವಾಹನದ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿಯೇ ಲಕ್ಷಾಂತರ ಹಣ ಖರ್ಚು ಮಾಡುತ್ತೇವೆ. ಗ್ರಾಮದಲ್ಲಿರುವ ಕೆಲವು ಫ್ಲಾಟುಗಳ ಮನೆಯವರು ಇದಕ್ಕೆ ಸ್ಪಂದಿಸದೇ ರಸ್ತೆ ಬದಿಯಲ್ಲಿ, ನೀರು ಹಾದು ಹೋಗುವ ಸೇತುವೆ ಬದಿಯಲ್ಲಿ ಬಿಸಾಡುತ್ತಾರೆ. ಎಷ್ಟು ಹೇಳಿದರೂ ಅವರಿಗೆ ಕಸ ಬಿಸಾಡುವ ಹವ್ಯಾಸಿವಾಗಿ ಬಿಟ್ಟಿದೆ. ಮುಂದಿನ ದಿನಗಳಲ್ಲಿ ಸೇತುವೆ ಬಳಿ ಸಿಸಿ ಕ್ಯಾಮರಾ ಅಳವಡಿಸಿ ಕಸ ಬಿಸಾಡುವವರನ್ನು ಪತ್ತೆ ಹಚ್ಚಲಾಗುವುದು ಎಂದು ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಶೀದಾ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು