11:27 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

09/01/2026, 15:54

ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಹೊಟೇಲ್ ಲಲಿತ್ ಅಶೋಕದಲ್ಲಿ ಗುರುವಾರ ಆಯೋಜಿಸಿದ್ದ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಪಕ್ಷದ ವತಿಯಿಂದ ನಡೆಸಬೇಕಾದ ಹೋರಾಟದ ಬಗ್ಗೆ ಚರ್ಚಿಸಲು ಪಕ್ಷದ ಸಚಿವರು, ಸಂಸದರು, ಶಾಸಕರು ಹಾಗೂ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಕೇಂದ್ರ ಸರ್ಕಾರದ ಈ ಹೊಸ ಕಾಯ್ದೆ ಜಾರಿ ಕಷ್ಟ. ಮನರೇಗಾ ಯೋಜನೆಯಲ್ಲಿ ಕಾಮಗಾರಿ ಆಯ್ಕೆ ಮಾಡುವ ಅಧಿಕಾರ ಪಂಚಾಯಿತಿಗಳ ಬಳಿ ಇತ್ತು. ಈಗ ದೆಹಲಿಯಿಂದ ತೀರ್ಮಾನ ಆಗುತ್ತದೆ. ಶೇಕಡಾ 40ರಷ್ಟು ಅನುದಾನ ಭರಿಸಲು ಯಾವುದೇ ರಾಜ್ಯಗಳಿಂದ ಸಾಧ್ಯವಿಲ್ಲ. ಈ ವಿಚಾರವಾಗಿ ಕೇಂದ್ರ ಸರ್ಕಾರ ತೀರ್ಮಾನ ಮಾಡುವ ಮುನ್ನ ರಾಜ್ಯಗಳ ಅಭಿಪ್ರಾಯ ಪಡೆಯಬೇಕಿತ್ತು. ರಾಜ್ಯಗಳ ಅಭಿಪ್ರಾಯ ಪಡೆಯದೇ ಈ ತೀರ್ಮಾನ ಮಾಡಿದ್ದಾರೆ. ಇದರ ವಿರುದ್ಧ ನಾವು ನಾಯ್ಯಾಲಯದ ಮೆಟ್ಟಿಲೇರುತ್ತೇವೆ. ಜತೆಗೆ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಪ್ರತಿ ಪಂಚಾಯತಿಯಲ್ಲಿ ಸಭೆ ನಡೆಸುತ್ತೇವೆ. ಪ್ರತಿ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಜನರಲ್ಲಿ ಅರಿವು ಮೂಡಿಸುತ್ತೇವೆ ಎಂದು ಹೇಳಿದರು.
ಇದು ಉದ್ಯೋಗ ಹಕ್ಕಿನ ವಿಚಾರ. ಜೀವನೋಪಾಯದ ಅಧಿಕಾರ ಮೊಟಕು ಸಹಿಸಲು ಸಾಧ್ಯವಿಲ್ಲ. ಇಡೀ ದೇಶದಲ್ಲಿ ಯಾವುದೇ ಪಂಚಾಯ್ತಿಯಾದರೂ ಇದನ್ನು ಅರಗಿಸಿಕೊಳ್ಳಲು ಆಗದು. ಎಲ್ಲಾ ಪಂಚಾಯಿತಿಯಲ್ಲಿ ಈ ಕಾಯ್ದೆ ವಿರುದ್ಧ ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿದರು.

*ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:*
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಜಾಹೀರಾತು ನೀಡಿರುವುದು ತಪ್ಪು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸವೇ ಗೊತ್ತಿಲ್ಲ. ಇದು ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಆರಂಭವಾದ ಪತ್ರಿಕೆ. ಇದು ದೇಶದ ಇತಿಹಾಸದ ಭಾಗವಾಗಿದೆ. ಪ್ರಹ್ಲಾದ್ ಜೋಷಿ ಅವರಾಗಲಿ, ಅವರ ಪಕ್ಷವಾಗಲಿ ಯಾವುದೇ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟಿಲ್ಲ. ಅವರು, ಅವರ ಪಕ್ಷದವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. ಹೀಗಾಗಿ ಅವರಿಗೆ ಅರಿವಿಲ್ಲ. ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದು ಕಾಂಗ್ರೆಸ್ ಪಕ್ಷ” ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು