3:21 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪ್ರಜಾಪ್ರಭುತ್ವ ವ್ಯವಸ್ಥೆ ಬಲವರ್ಧನೆಗೆ ವಿಧಾನಸಭೆ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ: ಸ್ಪೀಕರ್ ಯು.ಟಿ. ಖಾದರ್

31/07/2023, 19:02

ಮಂಗಳೂರು(reporterkarnataka.com): ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣ ಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ಅವರು ಸೋಮವಾರ ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿ ಕೊಂಡಿದ್ದ ಮಾಧ್ಯಮ ಸಂವಾದ ಗೋಷ್ಠಿ ಯನ್ನು ದ್ದೇಶಿಸಿ ಮಾತನಾಡಿದರು.
ಕೇರಳ ಮತ್ತು ಹಿಮಾಚಲ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಂಡಿದೆ.ಇದರಿಂದ ಸದನದ ಕಲಾಪವನ್ನು ಸಾರ್ವಜನಿಕರು ವೀಕ್ಷಿಸಿ ಸಮಸ್ಯೆ ತಿಳಿಸಲು ಅನುಕೂಲವಾಗಲಿದೆ ಎಂದು ಖಾದರ್ ತಿಳಿಸಿದರು.


ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠ ಗೊಳ್ಳಬೇಕಾದರೆ ವಿಧಾನಸಭಾ ಕಲಾಪಗಳು ಪರಿಣಾಮಕಾರಿಯಾಗಬೇಕು. ಆಗ ಉತ್ತಮ ಶಾಸನಗಳು ಜಾರಿಯಾಗಬಹುದು. ವಿಧಾನ ಸಭಾ ಕಲಾಪ ವ್ಯರ್ಥ ವಾಗದಂತೆ ನಿಭಾ ಯಿಸುವ ಹೊಣೆಗಾರಿಕೆ ಇದೆ ಎಂದು ಅವರು ನುಡಿದರು.
ಸರಕಾರ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ವಿಪಕ್ಷಗಳು ಕಲಾಪದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸ್ಪೀಕರ್ ನ ಪಾತ್ರವೂ ಮಹತ್ವದ್ದಾಗಿದೆ ಎಂದು ಖಾದರ್ ಅಭಿಪ್ರಾಯಪಟ್ಟರು.
ಸದನದಲ್ಲಿ ಪರಸ್ಪರ ಆರೋಪ ಸಹಜ ಒಂದು ಈ ನಡುವೆ ಕಲಾಪವನ್ನು ನಿರ್ದಿಷ್ಟ ಗುರಿಯತ್ತ ತಲುಪಿಸುವ ಗುರಿ ಸ್ಪೀಕರ್ ಮೇಲಿರುತ್ತದೆ. ಮಸೂದೆಯ ಬಗ್ಗೆ ಉತ್ತಮ ರೀತಿಯ ಚರ್ಚೆ ನಡೆದು ಅದು ಕಾನೂನು ಆಗಿ ಜಾರಿಯಾದರೆ ಪ್ರಜೆಗಳಿಗೆ ಅನುಕೂಲ ವಾಗುತ್ತದೆ. ಸದನದಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸಿರುವುದಾಗಿ ತಿಳಿಸಿದರು.
ಮಾಧ್ಯಮ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್ ಉಪಸ್ಥಿತರಿದ್ದರು. ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು. ಭಾಸ್ಕರ್ ರೈ ಕಟ್ಟ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು