4:14 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪ್ರಜ್ಞೆ ತಪ್ಪಿಸಿ ಯುವತಿಯ ಮೇಲೆ ಅತ್ಯಾಚಾರದ ಆರೋಪ: ಬಾಡಿ ಬಿಲ್ಡರ್ ಬಂಧನ

05/05/2022, 15:57

ಬೆಂಗಳೂರು(reporterkarnataka.com): ಅತ್ಯಾಚಾರದ ಆರೋಪದ ಮೇಲೆ ನಗರದ ಕೆ.ಜೆ. ಹಳ್ಳಿಯಲ್ಲಿ ಬಾಡಿ ಬಿಲ್ಡರ್ ವೊಬ್ಬನನ್ನು ಬಂಧಿಸಲಾಗಿದೆ.

ಮುಂಬೈ ಮೂಲದ 23 ವರ್ಷದ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಸೈಯದ್ ಸಿದ್ದಿಕಿ ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಫೆಬ್ರವರಿ 15 ರಂದು ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ವೀಡಿಯೊಗಳನ್ನು ನೋಡಿದ ನಂತರ ಸೈಯದ್ ಸಿದ್ದಿಕಿಯನ್ನು ಯುವತಿ ಸಂಪರ್ಕಿಸಿದ್ದಳು. ಆತ ತರಬೇತಿ ನೀಡಲು ಒಪ್ಪಿದ ನಂತರ, ಯುವತಿ ಬೆಂಗಳೂರಿಗೆ ಆಗಮಿಸಿದ್ದಳು. ಬೆಂಗಳೂರಿನಲ್ಲೇ ತಂಗಿದ್ದ ಯುವತಿಗೆ ಸಿದ್ಧಿಕಿ ತರಬೇತಿ ನೀಡಲು ಪ್ರಾರಂಭಿಸಿದನು. ರಾಷ್ಟ್ರೀಯ ಸ್ಪರ್ಧೆಗೆ ಸಿದ್ಧವಾಗಲು ಸ್ಟೀರಾಯ್ಡ್ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದನು. ಯುವತಿ ನಿರಾಕರಿಸಿದರೂ ಕೆಲವು ದಿನಗಳ ನಂತರ, ಸೈಯದ್ ಸಿದ್ದಿಕಿ  ಕುಡಿಯಲು ಏನೋ ಕೊಟ್ಟು ಪ್ರಜ್ಞೆ ಕಳೆದುಕೊಂಡ ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ.

ಸೈಯದ್ ಸಿದ್ದಿಕಿ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದನು. ಆದರೆ ಈಗ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಾಡಿ ಬಿಲ್ಡರ್ ನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು