6:26 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪ್ರಜ್ಞೆ ತಪ್ಪಿಸಿ ಯುವತಿಯ ಮೇಲೆ ಅತ್ಯಾಚಾರದ ಆರೋಪ: ಬಾಡಿ ಬಿಲ್ಡರ್ ಬಂಧನ

05/05/2022, 15:57

ಬೆಂಗಳೂರು(reporterkarnataka.com): ಅತ್ಯಾಚಾರದ ಆರೋಪದ ಮೇಲೆ ನಗರದ ಕೆ.ಜೆ. ಹಳ್ಳಿಯಲ್ಲಿ ಬಾಡಿ ಬಿಲ್ಡರ್ ವೊಬ್ಬನನ್ನು ಬಂಧಿಸಲಾಗಿದೆ.

ಮುಂಬೈ ಮೂಲದ 23 ವರ್ಷದ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಸೈಯದ್ ಸಿದ್ದಿಕಿ ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಫೆಬ್ರವರಿ 15 ರಂದು ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ವೀಡಿಯೊಗಳನ್ನು ನೋಡಿದ ನಂತರ ಸೈಯದ್ ಸಿದ್ದಿಕಿಯನ್ನು ಯುವತಿ ಸಂಪರ್ಕಿಸಿದ್ದಳು. ಆತ ತರಬೇತಿ ನೀಡಲು ಒಪ್ಪಿದ ನಂತರ, ಯುವತಿ ಬೆಂಗಳೂರಿಗೆ ಆಗಮಿಸಿದ್ದಳು. ಬೆಂಗಳೂರಿನಲ್ಲೇ ತಂಗಿದ್ದ ಯುವತಿಗೆ ಸಿದ್ಧಿಕಿ ತರಬೇತಿ ನೀಡಲು ಪ್ರಾರಂಭಿಸಿದನು. ರಾಷ್ಟ್ರೀಯ ಸ್ಪರ್ಧೆಗೆ ಸಿದ್ಧವಾಗಲು ಸ್ಟೀರಾಯ್ಡ್ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದನು. ಯುವತಿ ನಿರಾಕರಿಸಿದರೂ ಕೆಲವು ದಿನಗಳ ನಂತರ, ಸೈಯದ್ ಸಿದ್ದಿಕಿ  ಕುಡಿಯಲು ಏನೋ ಕೊಟ್ಟು ಪ್ರಜ್ಞೆ ಕಳೆದುಕೊಂಡ ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ.

ಸೈಯದ್ ಸಿದ್ದಿಕಿ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದನು. ಆದರೆ ಈಗ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಾಡಿ ಬಿಲ್ಡರ್ ನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು