2:54 AM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಹಾಸನದ ಅಶ್ಲೀಲ ವೀಡಿಯೊ ಪ್ರಕರಣ: ಸಮಗ್ರ ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

29/04/2024, 12:24

ಬೆಂಗಳೂರು(reporterkarnataka.com): ಹಾಸನದ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಸಂಬಂಧಿಸಿದ ಲೈಂಗಿಕ ಹಗರಣದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸಿದೆ.
ಈ ಕುರಿತು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮ ಅವರು ಪತ್ರಿಕಾ ಪ್ರಕಟನೆ ಹೊರಡಿಸಿ,
ದೇಶದಾದ್ಯಂತ ವೈರಲ್ ಆಗುತ್ತಿರುವ ಹಾಸನ ರಾಜಕಾರಣಿಯ ಪೆನ್ ಡ್ರೈವ್ ವೀಡಿಯೋ ಪ್ರಕರಣ ಪೈಶಾಚಿಕ ಕೃತ್ಯವಾಗಿದೆ. ಇದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದಿದ್ದಾರೆ.
ಬೇಲಿಯೇ ಎದ್ದು ಹೊಲ ಮೇಯ್ದಂತೆ, ಓರ್ವ ಜನಸೇವಕನಾಗಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸಬೇಕಾದ ರಾಜಕಾರಣಿಗಳ ಸುಪರ್ದಿಯಲ್ಲೂ ಹೆಣ್ಣು ಸುರಕ್ಷಿತಳಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.
ತಾನೋರ್ವ ಘನತೆವೆತ್ತ ಸ್ಥಾನದಲ್ಲಿರುವ ಜನಪ್ರತಿನಿಧಿ ಎಂಬುದನ್ನು ಮರೆತು, ಆಮಿಷ, ಬೆದರಿಕೆಗಳ ಮೂಲಕ
ಸುಮಾರು ಎರಡು ಸಾವಿರದಷ್ಟು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿದ್ದೇ ಅಲ್ಲದೆ, ಅದನ್ನು ಸ್ವತಃ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದಿರುವ ಈ ರಾಜಕಾರಣಿಯನ್ನು ಬಂಧಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯವೊದಗಿಸಬೇಕು. ಹೆಣ್ಣನ್ನು ಕೇವಲ ಭೋಗದ ವಸ್ತುವಾಗಿಸಿ, ಆಕೆಯ ಸ್ವಾಭಿಮಾನ, ಘನತೆ, ಗೌರವಗಳೊಂದಿಗೆ ಚೆಲ್ಲಾಟವಾಡಿರುವ ಈ ಅಪ್ರಬುದ್ಧ ರಾಜಕಾರಣಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವೀಡಿಯೋವನ್ನು ಪೆನ್ ಡ್ರೈವಿನಿಂದ ಪ್ರಸಾರ ಮಾಡಿದವರನ್ನೂ ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು.ಇದಕ್ಕಾಗಿ ವಿಶೇಷ ಕ್ಷಿಪ್ರ ತನಿಖಾ ತಂಡ ರಚಿಸಿ ಸಂತ್ರಸ್ತರಿಗೆ ಅಗತ್ಯ ಕಾನೂನು ಸಹಕಾರ, ಭದ್ರತೆ ಖಾತ್ರಿಪಡಿಸಬೇಕು. ವೈರಲ್ ಆಗುತ್ತಿರುವ ವೀಡಿಯೋ ಪ್ರಸಾರವನ್ನು ತಕ್ಷಣ ತಡೆಹಿಡಿಯುವ ವ್ಯವಸ್ಥೆಯನ್ನು ಮಾಡಬೇಕೆಂದು ಫಾತಿಮಾ ನಸೀಮ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು