5:40 AM Wednesday8 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಹಾಸನದ ಅಶ್ಲೀಲ ವೀಡಿಯೊ ಪ್ರಕರಣ: ಸಮಗ್ರ ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

29/04/2024, 12:24

ಬೆಂಗಳೂರು(reporterkarnataka.com): ಹಾಸನದ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಸಂಬಂಧಿಸಿದ ಲೈಂಗಿಕ ಹಗರಣದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸಿದೆ.
ಈ ಕುರಿತು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮ ಅವರು ಪತ್ರಿಕಾ ಪ್ರಕಟನೆ ಹೊರಡಿಸಿ,
ದೇಶದಾದ್ಯಂತ ವೈರಲ್ ಆಗುತ್ತಿರುವ ಹಾಸನ ರಾಜಕಾರಣಿಯ ಪೆನ್ ಡ್ರೈವ್ ವೀಡಿಯೋ ಪ್ರಕರಣ ಪೈಶಾಚಿಕ ಕೃತ್ಯವಾಗಿದೆ. ಇದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದಿದ್ದಾರೆ.
ಬೇಲಿಯೇ ಎದ್ದು ಹೊಲ ಮೇಯ್ದಂತೆ, ಓರ್ವ ಜನಸೇವಕನಾಗಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸಬೇಕಾದ ರಾಜಕಾರಣಿಗಳ ಸುಪರ್ದಿಯಲ್ಲೂ ಹೆಣ್ಣು ಸುರಕ್ಷಿತಳಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.
ತಾನೋರ್ವ ಘನತೆವೆತ್ತ ಸ್ಥಾನದಲ್ಲಿರುವ ಜನಪ್ರತಿನಿಧಿ ಎಂಬುದನ್ನು ಮರೆತು, ಆಮಿಷ, ಬೆದರಿಕೆಗಳ ಮೂಲಕ
ಸುಮಾರು ಎರಡು ಸಾವಿರದಷ್ಟು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿದ್ದೇ ಅಲ್ಲದೆ, ಅದನ್ನು ಸ್ವತಃ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದಿರುವ ಈ ರಾಜಕಾರಣಿಯನ್ನು ಬಂಧಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯವೊದಗಿಸಬೇಕು. ಹೆಣ್ಣನ್ನು ಕೇವಲ ಭೋಗದ ವಸ್ತುವಾಗಿಸಿ, ಆಕೆಯ ಸ್ವಾಭಿಮಾನ, ಘನತೆ, ಗೌರವಗಳೊಂದಿಗೆ ಚೆಲ್ಲಾಟವಾಡಿರುವ ಈ ಅಪ್ರಬುದ್ಧ ರಾಜಕಾರಣಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವೀಡಿಯೋವನ್ನು ಪೆನ್ ಡ್ರೈವಿನಿಂದ ಪ್ರಸಾರ ಮಾಡಿದವರನ್ನೂ ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು.ಇದಕ್ಕಾಗಿ ವಿಶೇಷ ಕ್ಷಿಪ್ರ ತನಿಖಾ ತಂಡ ರಚಿಸಿ ಸಂತ್ರಸ್ತರಿಗೆ ಅಗತ್ಯ ಕಾನೂನು ಸಹಕಾರ, ಭದ್ರತೆ ಖಾತ್ರಿಪಡಿಸಬೇಕು. ವೈರಲ್ ಆಗುತ್ತಿರುವ ವೀಡಿಯೋ ಪ್ರಸಾರವನ್ನು ತಕ್ಷಣ ತಡೆಹಿಡಿಯುವ ವ್ಯವಸ್ಥೆಯನ್ನು ಮಾಡಬೇಕೆಂದು ಫಾತಿಮಾ ನಸೀಮ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು