4:56 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ; ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ಮಾಜಿ ಸಿಎಂ ಕುಮಾರಸ್ವಾಮಿ

28/04/2024, 22:51

ಬೆಂಗಳೂರು(reporterkarnataka.com): ಹಾಸನ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ. ಅವರು ವಿದೇಶಕ್ಕೆ ಹೋಗಿದ್ದರೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಬರುತ್ತಾರೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಎಸ್‌ಐಟಿಗೆ ತನಿಖೆಗೆ ಆದೇಶ ಮಾಡಿದ್ದಾರೆ ಎಂಬುದನ್ನು ಗಮನಿಸಿದ್ದೇನೆ. ನಾನು ಮತ್ತು ದೇವೇಗೌಡ ಅವರು ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವದಿಂದ ನಡೆದುಕೊಂಡಿದ್ದೇವೆ. ಕಷ್ಟದಲ್ಲಿ ಬರುವ ಹೆಣ್ಣು ಮಕ್ಕಳಿಗೆ ಸಹಾಯ ಮಾಡಿ ಗೌರವದಿಂದ ಕಂಡಿದ್ದೇವೆ. ಹಾಸನದ ಚುನಾವಣೆ ಸಂದರ್ಭದಲ್ಲಿ ಈ ಪ್ರಕರಣವು ಹೊರ ಬಂದಿದೆ. ಈ ಬಗ್ಗೆ ಸರಕಾರ ಎಸ್‌ಐಟಿ ತನಿಖೆಗೆ ಆದೇಶಿದ್ದು, ಅದರ ಸಂಪೂರ್ಣ ವರದಿ ಬರಲಿ.
ಈ ನೆಲದ ಕಾನೂನಿನಲ್ಲಿ ಅವರಿಗೆ ಶಿಕ್ಷೆಯಾಗಬೇಕು. ತನಿಖೆಯ ವರದಿ ಬಂದ ನಂತರ ನಾನು ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ನುಡಿದಿದ್ದಾರೆ.
ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣಾ ಅಖಾಡ ಅಣಿಯಾಗುತ್ತಿದ್ದಂತೆ
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ರಾಜ್ಯಾದ್ಯಂತ ವಿಶೇಷವಾಗಿ, ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದವು.
ಈ ವಿಡಿಯೋ ತುಣುಕುಗಳು ಚುನಾವಣಾ ಪ್ರಚಾರ ಕಣದಲ್ಲಿ ದೊಡ್ಡ ಸದ್ದು ಮಾಡಿದ್ದವು. ಖಾಸಗಿ ಮೊಬೈಲ್‌ನಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾದ ವಿಡಿಯೋ ತುಣುಕುಗಳು ಸಾವಿರಾರು ಪೆನ್‌ಡ್ರೈವ್‌ಗಳ ಮೂಲಕ ಜನಸಾಮಾನ್ಯರನ್ನು ತಲುಪಿದ್ದರಲ್ಲಿ ಕೆಲವು ಪ್ರಮುಖ ನಾಯಕರ ಪಾತ್ರ ಇರುವ ಗುಮಾನಿಯ ಬಗ್ಗೆಯೂ ಕೇಳಿಬಂದಿದೆ.
.

ಇತ್ತೀಚಿನ ಸುದ್ದಿ

ಜಾಹೀರಾತು