3:08 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ !

21/05/2021, 18:16

ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ 

ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ

6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐಪಿಎಸ್ ಅಧಿಕಾರಿ ಕೆ.ವಿ. ಶರತ್ ಚಂದ್ರ ಅವರನ್ನು ಐಜಿಪಿ, ಫಾರೆಸ್ಟ್ ಸೆಲ್ ಗೆ ವರ್ಗಾವಣೆ ಮಾಡಲಾಗಿದೆ.

ಬಳ್ಳಾರಿ ವಲಯ ಐಜಿಪಿ ಎಂ. ನಂಜುಂಡಸ್ವಾಮಿ ಅವರನ್ನು(1997ನೇ ಕರ್ನಾಟಕ ಗ್ರೇಡ್ ಐಪಿಎಸ್ ಅಧಿಕಾರಿ ) ಬೆಂಗಳೂರಿನ ಬಂಧಿಖಾನೆಯ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಮನೀಶ್ ಖರ್ಬೀಕರ್ ಅವರನ್ನು ಕಲಬುರ್ಗಿಯ ಈಶಾನ್ಯ ವಿಭಾಗದ ಐಜಿಪಿ ಸ್ಥಾನದಿಂದ, ಬಳ್ಳಾರಿ ವಿಭಾಗದ ಐಜಿಪಿಯಾಗಿ, ರಾಘವೇಂದ್ರ ಸುಹಾಸ್ ಅವರನ್ನು ಬೆಳಗಾವಿಯ ನಾರ್ಥೆರೆನ್ ವಿಭಾಗದ ಐಜಿಪಿ ಸ್ಧಾನದಿಂದ ಎತ್ತಂಗಡಿ ಮಾಡಿ, ಬೆಂಗಳೂರಿನ ಆಂತರಿಕ ಭದ್ರತೆಯ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಎನ್. ಸತೀಶ್ ಕುಮಾರ್ ಅವರನ್ನು ಕಲಬುರ್ಗಿ ನಗರ ಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಬೆಳಗಾವಿ ವಿಭಾಗದ ಐಜಿಪಿಯಾಗಿ, ವೈ. ಎಸ್. ರವಿ ಕುಮಾರ್ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಕಲಬುರ್ಗಿ ನಗರ ವ್ಯಾಪ್ತಿಯ ಡಿಐಜಿ ಹಾಗೂ ಕಮೀಷನರ್ ಆಫ್ ಪೊಲೀಸ್ ಆಗಿ ವರ್ಗಾವಣೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು