5:53 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಪ್ರಸಕ್ತ ಮುಂಗಾರು: ರಾಜ್ಯದಲ್ಲಿ ಭಾರೀ ಮಳೆಗೆ ಒಟ್ಟು 44 ಮಂದಿ ಸಾವು; 600 ಮನೆಗಳು ಸಂಪೂರ್ಣ ನಾಶ; 2632 ಹೆಕ್ಟೇರ್ ಬೆಳೆ ಹಾನಿ

30/07/2024, 20:04

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ರಾಜ್ಯದಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಮಳೆ ಸಂಬಂಧಿಸಿದ ಅನಾಹುತದಲ್ಲಿ ಒಟ್ಟು 44 ಮಂದಿ ಪ್ರಾಣ ಕಳೆದುಕೊಂಡಿದ್ದು, 2632 ಹೆಕ್ಟೇರ್ ಬೆಳೆ ಹಾನಿಯಾಗಿದೆ.


ನೆರೆ, ಭೂಕುಸಿತ, ಮನೆ ನಾಶದಿಂದ ರಾಜ್ಯದ ವಿವಿಧೆಡೆಗಳಲ್ಲಿ ಈ ಸಾವು ಸಂಭವಿಸಿದೆ. ಕರಾವಳಿ,ಮಲೆನಾಡು ಹಾಗೂ ಮುಂಬೈ ಕರ್ನಾಟಕ ಪ್ರದೇಶದಲ್ಲಿ ಹೆಚ್ಚಿನ ಸಾವು ಸಂಭವಿಸಿದೆ. ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ 371 ಎಂಎಂ ಮಳೆಯಾಗಿದೆ. 225 ಎಂಎಂ ಸಾಮಾನ್ಯ ಮಳೆಯಾಗಿದ್ದು, ಈ ಬಾರಿ ಅಧಿಕ ಮಳೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಮಳೆಗೆ ಸಂಬಂಧಿಸಿದಂತೆ ಒಟ್ಟು 44 ಮಂದಿ ಸಾವನ್ನಪ್ಪಿದ್ದಾರೆ. ಭೂಕುಸಿತ, ಮನೆ ನಾಶದಿಂದ ಈ ಸಾವು ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಮಹಾ ದುರಂತ ಭೂಕುಸಿತ ಕೂಡ ಇದರಲ್ಲಿ ಸೇರಿದೆ.
ರಾಜ್ಯದಲ್ಲಿ ಒಟ್ಟು 600 ಮನೆಗಳು ಸಂಪೂರ್ಣ ನಾಶವಾಗಿದೆ. 4200 ಮನೆಗಳು ಭಾಗಶಃ ಹಾನಿಗೀಡಾಗಿವೆ. ಇದರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೇ 543 ಮನೆಗಳು ಸೇರಿವೆ. ನಂತರ ಉಡುಪಿ, ಹಾಸನ ಹಾಗೂ ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳು ಹಾನಿಗೀಡಾಗಿವೆ. ಬೆಳಗಾವಿ, ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ಸಾಕಷ್ಟು ಬೆಳೆ ಹಾನಿಗೀಡಾಗಿದೆ. ಕೃಷ್ಣಾ, ಘಟಪ್ರಭಾ ಹಾಗೂ ಭೀಮಾ ನದಿ ತೀರದ ಗ್ರಾಮಗಳ ಕೃಷಿಭೂಮಿಗೆ ಹಾನಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು