7:28 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಪ್ರಸಕ್ತ ಮುಂಗಾರು: ರಾಜ್ಯದಲ್ಲಿ ಭಾರೀ ಮಳೆಗೆ ಒಟ್ಟು 44 ಮಂದಿ ಸಾವು; 600 ಮನೆಗಳು ಸಂಪೂರ್ಣ ನಾಶ; 2632 ಹೆಕ್ಟೇರ್ ಬೆಳೆ ಹಾನಿ

30/07/2024, 20:04

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ರಾಜ್ಯದಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಮಳೆ ಸಂಬಂಧಿಸಿದ ಅನಾಹುತದಲ್ಲಿ ಒಟ್ಟು 44 ಮಂದಿ ಪ್ರಾಣ ಕಳೆದುಕೊಂಡಿದ್ದು, 2632 ಹೆಕ್ಟೇರ್ ಬೆಳೆ ಹಾನಿಯಾಗಿದೆ.


ನೆರೆ, ಭೂಕುಸಿತ, ಮನೆ ನಾಶದಿಂದ ರಾಜ್ಯದ ವಿವಿಧೆಡೆಗಳಲ್ಲಿ ಈ ಸಾವು ಸಂಭವಿಸಿದೆ. ಕರಾವಳಿ,ಮಲೆನಾಡು ಹಾಗೂ ಮುಂಬೈ ಕರ್ನಾಟಕ ಪ್ರದೇಶದಲ್ಲಿ ಹೆಚ್ಚಿನ ಸಾವು ಸಂಭವಿಸಿದೆ. ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ 371 ಎಂಎಂ ಮಳೆಯಾಗಿದೆ. 225 ಎಂಎಂ ಸಾಮಾನ್ಯ ಮಳೆಯಾಗಿದ್ದು, ಈ ಬಾರಿ ಅಧಿಕ ಮಳೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಮಳೆಗೆ ಸಂಬಂಧಿಸಿದಂತೆ ಒಟ್ಟು 44 ಮಂದಿ ಸಾವನ್ನಪ್ಪಿದ್ದಾರೆ. ಭೂಕುಸಿತ, ಮನೆ ನಾಶದಿಂದ ಈ ಸಾವು ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಮಹಾ ದುರಂತ ಭೂಕುಸಿತ ಕೂಡ ಇದರಲ್ಲಿ ಸೇರಿದೆ.
ರಾಜ್ಯದಲ್ಲಿ ಒಟ್ಟು 600 ಮನೆಗಳು ಸಂಪೂರ್ಣ ನಾಶವಾಗಿದೆ. 4200 ಮನೆಗಳು ಭಾಗಶಃ ಹಾನಿಗೀಡಾಗಿವೆ. ಇದರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೇ 543 ಮನೆಗಳು ಸೇರಿವೆ. ನಂತರ ಉಡುಪಿ, ಹಾಸನ ಹಾಗೂ ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳು ಹಾನಿಗೀಡಾಗಿವೆ. ಬೆಳಗಾವಿ, ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ಸಾಕಷ್ಟು ಬೆಳೆ ಹಾನಿಗೀಡಾಗಿದೆ. ಕೃಷ್ಣಾ, ಘಟಪ್ರಭಾ ಹಾಗೂ ಭೀಮಾ ನದಿ ತೀರದ ಗ್ರಾಮಗಳ ಕೃಷಿಭೂಮಿಗೆ ಹಾನಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು