8:14 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಪ್ರವಾಸಿ ತಾಣ, ಯಾತ್ರಾಸ್ಥಳ ಕೋಟೆಬೆಟ್ಟಕ್ಕಿಲ್ಲ ಸರಿಯಾದ ರಸ್ತೆ: ಅಭಿವೃದ್ಧಿ ಪಡಿಸಲು ಶಾಸಕರಿಗೆ ಆಗ್ರಹ

20/07/2021, 07:27

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ತಾಲೂಕಿನ ಪ್ರಮುಖ ಪ್ರವಾಸಿ ತಾಣವಾಗಿರುವ ಕೋಟೆಬೆಟ್ಟ ಗ್ರಾಮಕ್ಕೆ ಹೋಗುವ ರಸ್ತೆ ತೀರಾ ಕೆಟ್ಟು ಹೋಗಿದ್ದು, ಜನ ಹಾಗೂ ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ.ರಸ್ತೆ ಕೆಸರು ಗುಂಡಿಯಿಂದ ತುಂಬಿದ್ದು, ಕೊಚ್ಚೆ ಹೊಂಡಗಳು ಕೊಳೆತು ನಾರುತ್ತಿವೆ. 

ಈ ಗ್ರಾಮದಲ್ಲಿ ಯಾತ್ರಾ ಸ್ಥಳವಾದ ಪ್ರಸಿದ್ಧ  ಕಂಬದ ನರಸಿಂಹಸ್ವಾಮಿ ದೇವಾಲಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಇಲ್ಲಿಗೆ ಆಗಮಿಸುತ್ತಾರೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಇಲ್ಲಿಗೆ ಆಗಮಿಸುತ್ತಾರೆ. ಆದರೆ ಈ ದಾರಿಯಾಗಿ ತೆರಳುವುದು ಬಲು ದೊಡ್ಡ ಸವಾಲಾಗಿದೆ. ಸ್ಥಳೀಯ ಶಾಸಕರು ತಕ್ಷಣ ಪ್ರವಾಸಿ ತಾಣವಾಗಿರುವ ಕೋಟೆ ಬೆಟ್ಟಕ್ಕೆ ಹೋಗುವ ಮಾರ್ಗದ ರಸ್ತೆಯನ್ನು ದುರಸ್ತಿ ಮಾಡಿಸಬೇಕೆಂದು ಭಕ್ತಾದಿಗಳು ಹಾಗೂ ಅಲ್ಲಿನ ಜನತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು