6:17 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ಪ್ರಸಿದ್ಧ ರಂಗ ಕಲಾವಿದೆ, ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಶಿವಕುಮಾರಿ ಇನ್ನಿಲ್ಲ: ಗಣ್ಯರ ಸಂತಾಪ

13/08/2023, 13:43

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ರಾಜ್ಯೋತ್ಸವ ಪ್ರಶಸ್ತಿ ರಂಗಕಲಾವಿದೆ, ವಾಲ್ಮೀಕಿ ಸಮುದಾಯದ ರಾಜ್ಯಮಟ್ಟದ ಹಿರಿಯ ಕಲಾವಿದೆ ಕೂಡ್ಲಗಿಯ ಬಿ.ಶಿವಕುಮಾರಿ(55)
ಹೃದಯಘಾತದಿಂದ ನಿಧನರಾಗಿದ್ದಾರೆ.
ಅವರು ಓರ್ವ ಪುತ್ರ, ಸಹೋದರರು ಸಹೋದರಿಯರು, ಅಮ್ಮ, ಚಿಕ್ಕಮ್ಮಂದಿರು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟಗಲಿದ್ದಾರೆ.ಅವರು ತಮ್ಮ ಚಿಕ್ಕ ವಯಸ್ಸಿನಿಂದಲೇ ರಂಗಕಲಾ ಕ್ಷೇತ್ರಕ್ಕೆ, ಪಾದಾರ್ಪಣೆ ಮಾಡಿದವರು. ಅವರು ತಮ್ಮ ಸುಮಾರು ಮೂರ್ನಾಲ್ಕು ದಶಕಗಳ ಕಾಲ, ನಿರಂತರವಾಗಿ ರಂಗ ಕಲೆಯಲ್ಲಿ ತಮ್ಮನ್ನ ಅರ್ಪಿಸಿಕೊಂಡವರಾಗಿದ್ದಾರೆ. ರಾಜ್ಯದೆಲ್ಲೆಡೆ ತಮ್ಮ ಮನೋಜ್ಞವಾದ ಹಾಡುಗಾರಿಕೆ ಹಾಗೂ ಅಭಿನಯದ ಕಲೆಯಿಂದ ಹೆಸರು ಮಾಡಿ, ರಾಜ್ಯದೆಲ್ಲೆಡೆ ಅಭಿಜಾತ ರಂಗ ಕಲಾವಿದೆ ಎಂಬ ಕೀರ್ತಿ ಹೊಂದಿದ್ದರು. ಅವರ ಕಲಾ ಸೇವೆಗೆ ಕರ್ನಾಟಕ ರಾಜ್ಯೋತ್ಸವ , ರಾಜ್ಯ ರಂಗಕಲಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ. ಹತ್ತಾರು ರಾಜ್ಯ ಮಟ್ಟದ ಪ್ರಶಸ್ತಿಗಳು ಹಾಗೂ ಅಂಖ್ಯಾತ ವೇದಿಕೆಗಳಲ್ಲಿ, ಸನ್ಮಾನ ಪ್ರಶಸ್ತಿ ಪುರಸ್ಕಾರಗಳನ್ನು ತಮ್ಮ ಮುಡಿಗೆ ಹೊಂದಿದ್ದವರು.

ಸಂತಾಪ: ರಂಗಕಲಾವಿದೆ ಬಿ.ಶಿವಕುಮಾರಿ ರವರ ಅಗಲಿಕೆಗೆ, ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ಜಿಲ್ಲೆಯ ರಾಜ್ಯದ ಸಮಸ್ತ ವಾಲ್ಮೀಕಿ ಸಮುದಾಯವರು. ವಿವಿದ ಸಮುದಾಯದವರು.ಕ್ಷೇತ್ರದ ಶಾಸಕರಾದ ಡಾ”ಎನ್.ಟಿ.ಶ್ರೀನಿವಾಸ್ ರವರು. ಪಟ್ಟಣ ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು. ಜಿಲ್ಲಾ ಪಂಚಾಯ್ತಿ ಹಾಗೂ ವಿವಿದ ಜನ ಪ್ರತಿನಿಧಿಗಳು. ಶ್ರೀಪೇಟೆಬಸವೇಶ್ವರ ಭಜನೆ ಹಾಗೂ ರಂಗ ಕಲಾವಿದರ ಸಂಘ ಹಾಗೂ ಶ್ರಿರಾಮಲಿಂಗೇಶ್ವರ ರಂಗ ಕಲಾವಿದರ ಹಾಗೂ ಭಜನೆ ಮತ್ತು ಡೊಳ್ಳು ಕುಣಿತ ಕಲಾವಿದರ ಸಂಘ. ವಿವಿದ ಕಲಾವಿದರ ಸಂಘಟನೆಗಳು, ವಿವಿದ ಕನ್ನಡ ಪರ ಸಂಘಟನೆಗಳು, ವಿಬಿದ ಮಹಿಳಾ ಸಘಟನೆಗಳುಕೂಡ್ಲಿಗ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಮಿಕ, ದಲಿತ, ರೈತ ಸಂಘಟನೆಗಳು. ವಿವಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು.ವಿವಿದ ಪಕ್ಷಗಳ ಮುಖಂಡರು ಹಾಗೂ ಕಾರ್ಯಕಕರ್ತರು. ಪತ್ರಕರ್ತರು, ಸಮಾಜ ಸೇವಕರು, ಗಣ್ಯಮಾನ್ಯರು, ಹಿರಿಯ ರಂಗಕಲಾವಿದರು. ಯುವ ಕಲಾವಿದರು. ಹೋರಾಟಗಾರರು. ಸಂಗೀತ ಕಲಾವಿದರು. ರಂಗ ನಿರ್ಧೇಶಕರು. ಸಾಹಿತಿಗಳು, ನಾಡಿನ ಗಣ್ಯರು ರಂಗ ಕಲಾವಿದೆ ಬಿ.ಶಿವಕುಮಾರಿಯವ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು