10:36 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪ್ರಸಿದ್ಧ ರಂಗ ಕಲಾವಿದೆ, ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಶಿವಕುಮಾರಿ ಇನ್ನಿಲ್ಲ: ಗಣ್ಯರ ಸಂತಾಪ

13/08/2023, 13:43

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ರಾಜ್ಯೋತ್ಸವ ಪ್ರಶಸ್ತಿ ರಂಗಕಲಾವಿದೆ, ವಾಲ್ಮೀಕಿ ಸಮುದಾಯದ ರಾಜ್ಯಮಟ್ಟದ ಹಿರಿಯ ಕಲಾವಿದೆ ಕೂಡ್ಲಗಿಯ ಬಿ.ಶಿವಕುಮಾರಿ(55)
ಹೃದಯಘಾತದಿಂದ ನಿಧನರಾಗಿದ್ದಾರೆ.
ಅವರು ಓರ್ವ ಪುತ್ರ, ಸಹೋದರರು ಸಹೋದರಿಯರು, ಅಮ್ಮ, ಚಿಕ್ಕಮ್ಮಂದಿರು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟಗಲಿದ್ದಾರೆ.ಅವರು ತಮ್ಮ ಚಿಕ್ಕ ವಯಸ್ಸಿನಿಂದಲೇ ರಂಗಕಲಾ ಕ್ಷೇತ್ರಕ್ಕೆ, ಪಾದಾರ್ಪಣೆ ಮಾಡಿದವರು. ಅವರು ತಮ್ಮ ಸುಮಾರು ಮೂರ್ನಾಲ್ಕು ದಶಕಗಳ ಕಾಲ, ನಿರಂತರವಾಗಿ ರಂಗ ಕಲೆಯಲ್ಲಿ ತಮ್ಮನ್ನ ಅರ್ಪಿಸಿಕೊಂಡವರಾಗಿದ್ದಾರೆ. ರಾಜ್ಯದೆಲ್ಲೆಡೆ ತಮ್ಮ ಮನೋಜ್ಞವಾದ ಹಾಡುಗಾರಿಕೆ ಹಾಗೂ ಅಭಿನಯದ ಕಲೆಯಿಂದ ಹೆಸರು ಮಾಡಿ, ರಾಜ್ಯದೆಲ್ಲೆಡೆ ಅಭಿಜಾತ ರಂಗ ಕಲಾವಿದೆ ಎಂಬ ಕೀರ್ತಿ ಹೊಂದಿದ್ದರು. ಅವರ ಕಲಾ ಸೇವೆಗೆ ಕರ್ನಾಟಕ ರಾಜ್ಯೋತ್ಸವ , ರಾಜ್ಯ ರಂಗಕಲಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ. ಹತ್ತಾರು ರಾಜ್ಯ ಮಟ್ಟದ ಪ್ರಶಸ್ತಿಗಳು ಹಾಗೂ ಅಂಖ್ಯಾತ ವೇದಿಕೆಗಳಲ್ಲಿ, ಸನ್ಮಾನ ಪ್ರಶಸ್ತಿ ಪುರಸ್ಕಾರಗಳನ್ನು ತಮ್ಮ ಮುಡಿಗೆ ಹೊಂದಿದ್ದವರು.

ಸಂತಾಪ: ರಂಗಕಲಾವಿದೆ ಬಿ.ಶಿವಕುಮಾರಿ ರವರ ಅಗಲಿಕೆಗೆ, ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ಜಿಲ್ಲೆಯ ರಾಜ್ಯದ ಸಮಸ್ತ ವಾಲ್ಮೀಕಿ ಸಮುದಾಯವರು. ವಿವಿದ ಸಮುದಾಯದವರು.ಕ್ಷೇತ್ರದ ಶಾಸಕರಾದ ಡಾ”ಎನ್.ಟಿ.ಶ್ರೀನಿವಾಸ್ ರವರು. ಪಟ್ಟಣ ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು. ಜಿಲ್ಲಾ ಪಂಚಾಯ್ತಿ ಹಾಗೂ ವಿವಿದ ಜನ ಪ್ರತಿನಿಧಿಗಳು. ಶ್ರೀಪೇಟೆಬಸವೇಶ್ವರ ಭಜನೆ ಹಾಗೂ ರಂಗ ಕಲಾವಿದರ ಸಂಘ ಹಾಗೂ ಶ್ರಿರಾಮಲಿಂಗೇಶ್ವರ ರಂಗ ಕಲಾವಿದರ ಹಾಗೂ ಭಜನೆ ಮತ್ತು ಡೊಳ್ಳು ಕುಣಿತ ಕಲಾವಿದರ ಸಂಘ. ವಿವಿದ ಕಲಾವಿದರ ಸಂಘಟನೆಗಳು, ವಿವಿದ ಕನ್ನಡ ಪರ ಸಂಘಟನೆಗಳು, ವಿಬಿದ ಮಹಿಳಾ ಸಘಟನೆಗಳುಕೂಡ್ಲಿಗ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಮಿಕ, ದಲಿತ, ರೈತ ಸಂಘಟನೆಗಳು. ವಿವಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು.ವಿವಿದ ಪಕ್ಷಗಳ ಮುಖಂಡರು ಹಾಗೂ ಕಾರ್ಯಕಕರ್ತರು. ಪತ್ರಕರ್ತರು, ಸಮಾಜ ಸೇವಕರು, ಗಣ್ಯಮಾನ್ಯರು, ಹಿರಿಯ ರಂಗಕಲಾವಿದರು. ಯುವ ಕಲಾವಿದರು. ಹೋರಾಟಗಾರರು. ಸಂಗೀತ ಕಲಾವಿದರು. ರಂಗ ನಿರ್ಧೇಶಕರು. ಸಾಹಿತಿಗಳು, ನಾಡಿನ ಗಣ್ಯರು ರಂಗ ಕಲಾವಿದೆ ಬಿ.ಶಿವಕುಮಾರಿಯವ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು