1:10 PM Sunday22 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

ಪ್ರಾಥಮಿಕ ಶಾಲಾ ಮಕ್ಕಳ ಕಲ್ಲಡ್ಕ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

22/08/2024, 14:23

ಕಲ್ಲಡ್ಕ(reporterkarnataka.com): ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ, ಕ್ರೀಡೆಯಿಂದ ದೈಹಿಕ ಆರೋಗ್ಯ ವೃದ್ಧಿ ಆಗುತ್ತೆ ಎಂದು ನಿವೃತ್ತ ದೈಹಿಕ ಶಿಕ್ಷಕ ಶಂಕರ್ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ನೆಟ್ಲ
ಸರಕಾರಿ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಕಲ್ಲಡ್ಕವಲಯ ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ದೇಶಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಕುಲಾಲ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಗೋಳ್ತಮಜಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ್, ಸದಸ್ಯ ದೀಪಕ್ ಕುಮಾರ್, ಶಂಬೂರ್ ಶಾಲಾ ಮುಖ್ಯ ಶಿಕ್ಷಕ ಜಯರಾಮ್, ಕಡೆಶಿವಾಲಯ ಶಾಲಾ ದೈಹಿಕ ಶಿಕ್ಷಕ ಭಾಸ್ಕರ್, ನೆಟ್ಲ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ವಿನಯ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಲೋಕನಾಥ್ ಕುಲಾಲ್, ನೇರಳಕಟ್ಟೆ ಶಾಲಾ ದೈಹಿಕ ಶಿಕ್ಷಕಿ ಶೋಭಾ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶೋಭಲತಾ ಬಿ. ಸ್ವಾಗತಿಸಿದರು. ಶಾಲಾ ಕಂಪ್ಯೂಟರ್ ಶಿಕ್ಷಕಿ ಇಂದಿರಾ ವಂದಿಸಿದರು. ಸಹ ಶಿಕ್ಷಕ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಕ್ರೀಡಾಕೂಟದ ನೆನಪಿಗಾಗಿ ಹಣ್ಣಿನ ಗಿಡ ನೆಟ್ಟು, ಕ್ರೀಡಾಂಗಣಕ್ಕೆ ಫಲ ಪುಷ್ಪ ಸಮರ್ಪಿಸಿ ಪಂದ್ಯಾಟವನ್ನು ಪ್ರಾರಂಭಿಸಲಾಯಿತು.
ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೆರಾಜೆ ಮಾಣಿ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರಾಥಮಿಕ ಶಾಲೆ ಅನಂತಾಡಿ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಾಣಿ ಹಾಗೂ ದ್ವಿತೀಯ ಸ್ಥಾನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಂಬೂರ್ ಪಡೆದುಕೊಂಡಿತ್ತು. ವಿಜೇತ ಶಾಲಾ ತಂಡಗಳಿಗೆ ಟ್ರೋಪಿ ನೀಡಿ ಗೌರವಿಸಲಾಯಿತು. ಉಳಿದಂತೆ ಭಾಗವಹಿಸಿದ ಎಲ್ಲಾ ತಂಡಗಳಿಗೆ ಶಾಲಾ ಪರವಾಗಿ ಕ್ರೀಡಾಕೂಟದ ನೆನಪಿನ ಸ್ಮರಣೆಕೆ ನೀಡಲಾಯಿತು. ಕ್ರೀಡಾಕೂಟದ ಯಶಸ್ವಿಗೆ ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಅಡುಗೆ ಸಿಬ್ಬಂದಿಗಳು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು