9:39 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಪ್ರಾಥಮಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುಗಮ: ಸ್ಥಳದಲ್ಲೇ ಆದೇಶಪತ್ರ ವಿತರಿಸಿದ ಡಿಡಿಪಿಐ 

21/11/2021, 09:59

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಡಿಡಿಪಿಐ ಕಚೇರಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆದಿದೆ.

ಪ್ರಕ್ರಿಯೆಯಲ್ಲಿ 10 ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡಿಪಿಐ ರೇವಣಸಿದ್ದಪ್ಪ ವರ್ಗಾವಣೆ ಆದೇಶ ವಿತರಿಸಿದರು. ಜಿಲ್ಲೆಯಲ್ಲಿ ಪಾಥಮಿಕ ಶಾಲಾ ವಿಭಾಗದಿಂದ 20 ಮಂದಿ ಪರಸ್ಪರ ವರ್ಗಾವಣೆಗೆ ಅರ್ಜಿ ಹಾಕಿದ್ದು , 12 ಮಂದಿ ಹಾಜರಾಗಿದ್ದರು ಮತ್ತು 10 ಮಂದಿ ವರ್ಗಾವಣೆ ಆದೇಶ ಪಡೆದುಕೊಂಡರು. ವಿಕಲಚೇತನರೊಬ್ಬರು ಸ್ಥಳ ಆಯ್ಕೆ ಮಾಡಿಕೊಂಡಿದ್ದು , ಡಿಡಿಪಿಐ ರೇವಣಸಿದ್ದಪ್ಪ , ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್.ಅಶೋಕ್ ಅವರಿದ್ದ ಸ್ಥಳಕ್ಕೆ ಹೋಗಿ ಆದೇಶ ವಿತರಿಸಿದರು . 

ಡಿಡಿಪಿಐ ರೇವಣ ಸಿದ್ದಪ್ಪ ಈ ಸಂದರ್ಭದಲ್ಲಿ ಮಾತನಾಡಿ , ವರ್ಗಾವಣೆಯಾಗಿರುವ ಶಿಕ್ಷಕರು ಸಮಯಪಜ್ಜೆಯಿಂದ ವರ್ತಿಸಿ , ಸಕಾಲಕ್ಕೆ ಹೋಗಿ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದರು . 

ವರ್ಗಾವಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು , ಶಿಕ್ಷಕರನ್ನು ಅಲೆಸದೇ ಸ್ಥಳದಲ್ಲೇ ವರ್ಗಾವಣೆ ಆದೇಶ ಪತ ವಿತರಿಸಲಾಗಿದೆ ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್‌.ಅಶೋಕ್‌ , ಪಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪಧಾನ ಕಾರ್ಯದರ್ಶಿ ಎಂ.ನಾಗರಾಜ್ ಎಷಯ ಪರಿವೀಕ್ಷಕ ಕೃಷ್ಣಪ್ಪ , ಅಧೀಕ್ಷಕರಾದ ಮಂಜುನಾಥರೆಡ್ಡಿ ಗೋವಿಂದಗೌಡ , ಸಿಬ್ಬಂದಿ ಚಿರಂಜೀವಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು