2:06 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪ್ರಾಥಮಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುಗಮ: ಸ್ಥಳದಲ್ಲೇ ಆದೇಶಪತ್ರ ವಿತರಿಸಿದ ಡಿಡಿಪಿಐ 

21/11/2021, 09:59

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಡಿಡಿಪಿಐ ಕಚೇರಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆದಿದೆ.

ಪ್ರಕ್ರಿಯೆಯಲ್ಲಿ 10 ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡಿಪಿಐ ರೇವಣಸಿದ್ದಪ್ಪ ವರ್ಗಾವಣೆ ಆದೇಶ ವಿತರಿಸಿದರು. ಜಿಲ್ಲೆಯಲ್ಲಿ ಪಾಥಮಿಕ ಶಾಲಾ ವಿಭಾಗದಿಂದ 20 ಮಂದಿ ಪರಸ್ಪರ ವರ್ಗಾವಣೆಗೆ ಅರ್ಜಿ ಹಾಕಿದ್ದು , 12 ಮಂದಿ ಹಾಜರಾಗಿದ್ದರು ಮತ್ತು 10 ಮಂದಿ ವರ್ಗಾವಣೆ ಆದೇಶ ಪಡೆದುಕೊಂಡರು. ವಿಕಲಚೇತನರೊಬ್ಬರು ಸ್ಥಳ ಆಯ್ಕೆ ಮಾಡಿಕೊಂಡಿದ್ದು , ಡಿಡಿಪಿಐ ರೇವಣಸಿದ್ದಪ್ಪ , ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್.ಅಶೋಕ್ ಅವರಿದ್ದ ಸ್ಥಳಕ್ಕೆ ಹೋಗಿ ಆದೇಶ ವಿತರಿಸಿದರು . 

ಡಿಡಿಪಿಐ ರೇವಣ ಸಿದ್ದಪ್ಪ ಈ ಸಂದರ್ಭದಲ್ಲಿ ಮಾತನಾಡಿ , ವರ್ಗಾವಣೆಯಾಗಿರುವ ಶಿಕ್ಷಕರು ಸಮಯಪಜ್ಜೆಯಿಂದ ವರ್ತಿಸಿ , ಸಕಾಲಕ್ಕೆ ಹೋಗಿ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದರು . 

ವರ್ಗಾವಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು , ಶಿಕ್ಷಕರನ್ನು ಅಲೆಸದೇ ಸ್ಥಳದಲ್ಲೇ ವರ್ಗಾವಣೆ ಆದೇಶ ಪತ ವಿತರಿಸಲಾಗಿದೆ ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್‌.ಅಶೋಕ್‌ , ಪಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪಧಾನ ಕಾರ್ಯದರ್ಶಿ ಎಂ.ನಾಗರಾಜ್ ಎಷಯ ಪರಿವೀಕ್ಷಕ ಕೃಷ್ಣಪ್ಪ , ಅಧೀಕ್ಷಕರಾದ ಮಂಜುನಾಥರೆಡ್ಡಿ ಗೋವಿಂದಗೌಡ , ಸಿಬ್ಬಂದಿ ಚಿರಂಜೀವಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು