1:43 AM Monday3 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಪ್ರತಿ ದಿನವೂ ಮಕ್ಕಳ ದಿನವೇ: ಚಿಣ್ಣರ ಕಲರವ ಎಲ್ಲೆಡೆ ಕೇಳುತ್ತಿರಲಿಲ್ಲ

14/11/2021, 09:38

ಮಕ್ಕಳಿರಲಿ ಮನೆ ತುಂಬಾ… ಹರಡುತ್ತಿರಲಿ ನಗು ಹೃದಯ ತುಂಬಾ.. 

ಮನೆ ತುಂಬಾ ಓಡಾಡುವ ಮಕ್ಕಳ ಕಿಲ ಕಿಲ ನಗುವಿನ ಶಬ್ದ , ಆಗಾಗ ಕಿವಿಗೆ ಅಪ್ಪಳಿಸುವಂತೆ ಕೇಳುವ ಕಿರುಚಾಟ ,ಕೂಗಾಟ, ಮುದ್ದುಮುದ್ದು ಮಾತುಗಳನ್ನು ಕೇಳುವಾಗ ಆಗುವಂತಹ ಸಂತೋಷ ಹೇಳಲು ಅಸಾಧ್ಯ.


ಮಗುವಿನ ಸುಂದರ ಮೊಗ ನೋಡುವಾಗ ಮನಸ್ಸಿಗೆ ಆಗುವಂತಹ ಆನಂದ ವರ್ಣಿಸಲಸದಳ.. 


ಇಂತಹ ಮುದ್ದು ಮನಸಿನ ಮಗು ಮನೆಬಿಟ್ಟು ಶಾಲೆಗೆ ಸೇರಿದ ನಂತರ ಶಾಲೆಯಲ್ಲಿ  ಪಡೆಯುವ ಶಿಕ್ಷಣವು ಮಗುವಿನ ಜೀವನ ಗತಿಯನ್ನೇ ಬದಲಾಯಿಸುತ್ತದೆ.

ಶಾಲೆಯಲ್ಲಿ ಗೆಳೆಯರೊಂದಿಗೆ ಸೇರಿ ಸಹಕಾರ , ಸಹನೆ , ಸಹೋದರತೆ, ಶಿಕ್ಷಕರೊಂದಿಗೆ ಗುರು ಹಿರಿಯರೊಂದಿಗೆ ಗೌರವದಿಂದ ವರ್ತಿಸುವ ವಿಧಾನ ಎಲ್ಲವನ್ನೂ ಶಿಕ್ಷಣದಿಂದ ಕಲಿಯುತ್ತಾರೆ.

ನವೆಂಬರ್ 14 ಬಂತೆಂದರೆ ಮಕ್ಕಳ ಮನದಲ್ಲಿ ಸಂಭ್ರಮ ಮನೆ ಮಾಡುತ್ತದೆ. ಶಿಕ್ಷಕರು ತರಗತಿಗೆ ಹೋಗುವಾಗ ತಮ್ಮ ಮನದಿಂಗಿತವನ್ನು , ಆಶಯವನ್ನು ವ್ಯಕ್ತಪಡಿಸುತ್ತಾರೆ. ಮಕ್ಕಳ ದಿನಾಚರಣೆ ಆಚರಿಸುವ ಬಗ್ಗೆ ಕೇಳುತ್ತಾರೆ. ಮಕ್ಕಳ ದಿನಾಚರಣೆಯಂದು ಇಡೀ ದಿನ ಸಂತೋಷದಿಂದ ಕಳೆಯುತ್ತಾರೆ. ಆ ದಿನ ಮಕ್ಕಳ ಹಬ್ಬ , ಚಿಣ್ಣರ ಚಿಲಿಪಿಲಿ ಹೊಸ ಬಟ್ಟೆ ಹಾಕಿಕೊಂಡು  ಶಾಲೆಗೆ ಬರುವ ಸಂಭ್ರಮದ ಗುಂಗಿನಲ್ಲಿರುತ್ತಾರೆ ,

ಶಾಲೆಯಲ್ಲಿ ಆಟೋಟ ಸ್ಪರ್ಧೆಗಳು ಹಾಡು , ನೃತ್ಯ ಮಾಡುವುದರಿಂದ  ಬಹುಮಾನ ಪಡೆಯುವ ಮೂಲಕ ಸಂಭ್ರಮಿಸುತ್ತಾರೆ. ಎಲ್ಲರೊಂದಿಗೆ ಖುಷಿಯಿಂದ ಬೆರೆತು ಕಲಿತು ಸಂಭ್ರಮವನ್ನು ಆಚರಿಸುತ್ತಾರೆ.. ಈ ಸಂಭ್ರಮ ಕೇವಲ ಮಕ್ಕಳ ದಿನಾಚರಣೆಯಂದು ಮಾತ್ರ ಇರದೆ ಪ್ರತಿದಿನವೂ ಪ್ರತಿಕ್ಷಣವು ಇರಲಿ ಎಂಬುದೇ ನಮ್ಮ ಆಶಯ.

✍️

ಇತ್ತೀಚಿನ ಸುದ್ದಿ

ಜಾಹೀರಾತು