5:49 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಪ್ರತಿ ದಿನವೂ ಮಕ್ಕಳ ದಿನವೇ: ಚಿಣ್ಣರ ಕಲರವ ಎಲ್ಲೆಡೆ ಕೇಳುತ್ತಿರಲಿಲ್ಲ

14/11/2021, 09:38

ಮಕ್ಕಳಿರಲಿ ಮನೆ ತುಂಬಾ… ಹರಡುತ್ತಿರಲಿ ನಗು ಹೃದಯ ತುಂಬಾ.. 

ಮನೆ ತುಂಬಾ ಓಡಾಡುವ ಮಕ್ಕಳ ಕಿಲ ಕಿಲ ನಗುವಿನ ಶಬ್ದ , ಆಗಾಗ ಕಿವಿಗೆ ಅಪ್ಪಳಿಸುವಂತೆ ಕೇಳುವ ಕಿರುಚಾಟ ,ಕೂಗಾಟ, ಮುದ್ದುಮುದ್ದು ಮಾತುಗಳನ್ನು ಕೇಳುವಾಗ ಆಗುವಂತಹ ಸಂತೋಷ ಹೇಳಲು ಅಸಾಧ್ಯ.


ಮಗುವಿನ ಸುಂದರ ಮೊಗ ನೋಡುವಾಗ ಮನಸ್ಸಿಗೆ ಆಗುವಂತಹ ಆನಂದ ವರ್ಣಿಸಲಸದಳ.. 


ಇಂತಹ ಮುದ್ದು ಮನಸಿನ ಮಗು ಮನೆಬಿಟ್ಟು ಶಾಲೆಗೆ ಸೇರಿದ ನಂತರ ಶಾಲೆಯಲ್ಲಿ  ಪಡೆಯುವ ಶಿಕ್ಷಣವು ಮಗುವಿನ ಜೀವನ ಗತಿಯನ್ನೇ ಬದಲಾಯಿಸುತ್ತದೆ.

ಶಾಲೆಯಲ್ಲಿ ಗೆಳೆಯರೊಂದಿಗೆ ಸೇರಿ ಸಹಕಾರ , ಸಹನೆ , ಸಹೋದರತೆ, ಶಿಕ್ಷಕರೊಂದಿಗೆ ಗುರು ಹಿರಿಯರೊಂದಿಗೆ ಗೌರವದಿಂದ ವರ್ತಿಸುವ ವಿಧಾನ ಎಲ್ಲವನ್ನೂ ಶಿಕ್ಷಣದಿಂದ ಕಲಿಯುತ್ತಾರೆ.

ನವೆಂಬರ್ 14 ಬಂತೆಂದರೆ ಮಕ್ಕಳ ಮನದಲ್ಲಿ ಸಂಭ್ರಮ ಮನೆ ಮಾಡುತ್ತದೆ. ಶಿಕ್ಷಕರು ತರಗತಿಗೆ ಹೋಗುವಾಗ ತಮ್ಮ ಮನದಿಂಗಿತವನ್ನು , ಆಶಯವನ್ನು ವ್ಯಕ್ತಪಡಿಸುತ್ತಾರೆ. ಮಕ್ಕಳ ದಿನಾಚರಣೆ ಆಚರಿಸುವ ಬಗ್ಗೆ ಕೇಳುತ್ತಾರೆ. ಮಕ್ಕಳ ದಿನಾಚರಣೆಯಂದು ಇಡೀ ದಿನ ಸಂತೋಷದಿಂದ ಕಳೆಯುತ್ತಾರೆ. ಆ ದಿನ ಮಕ್ಕಳ ಹಬ್ಬ , ಚಿಣ್ಣರ ಚಿಲಿಪಿಲಿ ಹೊಸ ಬಟ್ಟೆ ಹಾಕಿಕೊಂಡು  ಶಾಲೆಗೆ ಬರುವ ಸಂಭ್ರಮದ ಗುಂಗಿನಲ್ಲಿರುತ್ತಾರೆ ,

ಶಾಲೆಯಲ್ಲಿ ಆಟೋಟ ಸ್ಪರ್ಧೆಗಳು ಹಾಡು , ನೃತ್ಯ ಮಾಡುವುದರಿಂದ  ಬಹುಮಾನ ಪಡೆಯುವ ಮೂಲಕ ಸಂಭ್ರಮಿಸುತ್ತಾರೆ. ಎಲ್ಲರೊಂದಿಗೆ ಖುಷಿಯಿಂದ ಬೆರೆತು ಕಲಿತು ಸಂಭ್ರಮವನ್ನು ಆಚರಿಸುತ್ತಾರೆ.. ಈ ಸಂಭ್ರಮ ಕೇವಲ ಮಕ್ಕಳ ದಿನಾಚರಣೆಯಂದು ಮಾತ್ರ ಇರದೆ ಪ್ರತಿದಿನವೂ ಪ್ರತಿಕ್ಷಣವು ಇರಲಿ ಎಂಬುದೇ ನಮ್ಮ ಆಶಯ.

✍️

ಇತ್ತೀಚಿನ ಸುದ್ದಿ

ಜಾಹೀರಾತು