9:37 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಪ್ರತಿ ದಿನವೂ ಮಕ್ಕಳ ದಿನವೇ: ಚಿಣ್ಣರ ಕಲರವ ಎಲ್ಲೆಡೆ ಕೇಳುತ್ತಿರಲಿಲ್ಲ

14/11/2021, 09:38

ಮಕ್ಕಳಿರಲಿ ಮನೆ ತುಂಬಾ… ಹರಡುತ್ತಿರಲಿ ನಗು ಹೃದಯ ತುಂಬಾ.. 

ಮನೆ ತುಂಬಾ ಓಡಾಡುವ ಮಕ್ಕಳ ಕಿಲ ಕಿಲ ನಗುವಿನ ಶಬ್ದ , ಆಗಾಗ ಕಿವಿಗೆ ಅಪ್ಪಳಿಸುವಂತೆ ಕೇಳುವ ಕಿರುಚಾಟ ,ಕೂಗಾಟ, ಮುದ್ದುಮುದ್ದು ಮಾತುಗಳನ್ನು ಕೇಳುವಾಗ ಆಗುವಂತಹ ಸಂತೋಷ ಹೇಳಲು ಅಸಾಧ್ಯ.


ಮಗುವಿನ ಸುಂದರ ಮೊಗ ನೋಡುವಾಗ ಮನಸ್ಸಿಗೆ ಆಗುವಂತಹ ಆನಂದ ವರ್ಣಿಸಲಸದಳ.. 


ಇಂತಹ ಮುದ್ದು ಮನಸಿನ ಮಗು ಮನೆಬಿಟ್ಟು ಶಾಲೆಗೆ ಸೇರಿದ ನಂತರ ಶಾಲೆಯಲ್ಲಿ  ಪಡೆಯುವ ಶಿಕ್ಷಣವು ಮಗುವಿನ ಜೀವನ ಗತಿಯನ್ನೇ ಬದಲಾಯಿಸುತ್ತದೆ.

ಶಾಲೆಯಲ್ಲಿ ಗೆಳೆಯರೊಂದಿಗೆ ಸೇರಿ ಸಹಕಾರ , ಸಹನೆ , ಸಹೋದರತೆ, ಶಿಕ್ಷಕರೊಂದಿಗೆ ಗುರು ಹಿರಿಯರೊಂದಿಗೆ ಗೌರವದಿಂದ ವರ್ತಿಸುವ ವಿಧಾನ ಎಲ್ಲವನ್ನೂ ಶಿಕ್ಷಣದಿಂದ ಕಲಿಯುತ್ತಾರೆ.

ನವೆಂಬರ್ 14 ಬಂತೆಂದರೆ ಮಕ್ಕಳ ಮನದಲ್ಲಿ ಸಂಭ್ರಮ ಮನೆ ಮಾಡುತ್ತದೆ. ಶಿಕ್ಷಕರು ತರಗತಿಗೆ ಹೋಗುವಾಗ ತಮ್ಮ ಮನದಿಂಗಿತವನ್ನು , ಆಶಯವನ್ನು ವ್ಯಕ್ತಪಡಿಸುತ್ತಾರೆ. ಮಕ್ಕಳ ದಿನಾಚರಣೆ ಆಚರಿಸುವ ಬಗ್ಗೆ ಕೇಳುತ್ತಾರೆ. ಮಕ್ಕಳ ದಿನಾಚರಣೆಯಂದು ಇಡೀ ದಿನ ಸಂತೋಷದಿಂದ ಕಳೆಯುತ್ತಾರೆ. ಆ ದಿನ ಮಕ್ಕಳ ಹಬ್ಬ , ಚಿಣ್ಣರ ಚಿಲಿಪಿಲಿ ಹೊಸ ಬಟ್ಟೆ ಹಾಕಿಕೊಂಡು  ಶಾಲೆಗೆ ಬರುವ ಸಂಭ್ರಮದ ಗುಂಗಿನಲ್ಲಿರುತ್ತಾರೆ ,

ಶಾಲೆಯಲ್ಲಿ ಆಟೋಟ ಸ್ಪರ್ಧೆಗಳು ಹಾಡು , ನೃತ್ಯ ಮಾಡುವುದರಿಂದ  ಬಹುಮಾನ ಪಡೆಯುವ ಮೂಲಕ ಸಂಭ್ರಮಿಸುತ್ತಾರೆ. ಎಲ್ಲರೊಂದಿಗೆ ಖುಷಿಯಿಂದ ಬೆರೆತು ಕಲಿತು ಸಂಭ್ರಮವನ್ನು ಆಚರಿಸುತ್ತಾರೆ.. ಈ ಸಂಭ್ರಮ ಕೇವಲ ಮಕ್ಕಳ ದಿನಾಚರಣೆಯಂದು ಮಾತ್ರ ಇರದೆ ಪ್ರತಿದಿನವೂ ಪ್ರತಿಕ್ಷಣವು ಇರಲಿ ಎಂಬುದೇ ನಮ್ಮ ಆಶಯ.

✍️

ಇತ್ತೀಚಿನ ಸುದ್ದಿ

ಜಾಹೀರಾತು